Tuesday, May 24, 2022

ಮೇ.೨೫ರಂದು ಮೆಸ್ಕಾಂ ಜನಸಂಪರ್ಕ ಸಭೆ

    ಭದ್ರಾವತಿ, ಮೇ. ೨೪: ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮೇ.೨೫ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
    ಗ್ರಾಮೀಣ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯುತ್ ಸಂಬಂಧಿತ ತಮ್ಮ ಕುಂದುಕೊರತೆ/ಅಹವಾಲುಗಳನ್ನು ಸಲ್ಲಿಸಿ ಬಗೆಹರಿಸಿಕೊಳ್ಳಲು ಕೋರಲಾಗಿದೆ. ಮೆಸ್ಕಾಂ ಅಧೀಕ್ಷಕ ಇಂಜನಿಯರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
    ಕಾರೇಹಳ್ಳಿ, ಬಾರಂದೂರು, ಅಂತರಗಂಗೆ, ದೊಡ್ಡೇರಿ, ಬಿ.ಆರ್.ಪಿ, ದೊಣಬಘಟ್ಟ, ತಡಸ, ಬಿಳಿಕಿ, ಅರಳಿಕೊಪ್ಪ, ಕಂಬದಾಳ್ ಹೊಸೂರು, ಅರಳಿಹಳ್ಳಿ, ಕೂಡ್ಲಿಗೆರೆ, ಅತ್ತಿಗುಂದ, ವೀರಾಪುರ, ಕಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ಪಾಲ್ಗೊಳ್ಳಬಹುದಾಗಿದೆ ಎಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

No comments:

Post a Comment