Tuesday, May 3, 2022

ನಗರಸಭೆಯಲ್ಲಿ ಬಸವೇಶ್ವರರ ಜಯಂತ್ಯೋತ್ಸವ

ವಿಶ್ವ ಜ್ಞಾನಿ, ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಮಂಗಳವಾರ ಭದ್ರಾವತಿ ನಗರಸಭೆಯಲ್ಲಿ ಆಚರಿಸಲಾಯಿತು.
    ಭದ್ರಾವತಿ, ಮೇ. ೩: ವಿಶ್ವ ಜ್ಞಾನಿ, ಮಹಾಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಮಂಗಳವಾರ ನಗರಸಭೆಯಲ್ಲಿ ಆಚರಿಸಲಾಯಿತು.
    ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಹಿರಿಯ ಸದಸ್ಯ ಬಿ.ಕೆ ಮೋಹನ್ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಈಶ್ವರಪ್ಪ ನಿರೂಪಿಸಿ, ರಾಜಕುಮಾರ್ ಸ್ವಾಗತಿಸಿದರು. ನರಸಿಂಹ ಮೂರ್ತಿ ವಂದಿಸಿದರು.


No comments:

Post a Comment