Friday, May 20, 2022

ಮೇ.೨೧ರಂದು ಮಹಾ ರಥೋತ್ಸವ, ಸಮುದಾಯ ಭವನ ಉದ್ಘಾಟನೆ

    ಭದ್ರಾವತಿ, ಮೇ. ೨೦: ತಾಲೂಕು ಕಛೇರಿ ರಸ್ತೆಯಲ್ಲಿರುವ ಕಂಚಿನಬಾಗಿಲು ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಮಹಾ ರಥೋತ್ಸವ ಹಾಗು ಮಿನಿ ಸಮುದಾಯ ಭವನದ ಉದ್ಘಾಟನೆ ಮೇ.೨೧ರಂದು ನಡೆಯಲಿದೆ.
    ಪ್ರತಿ ವರ್ಷದಂತೆ ಈ ಬಾರಿ ಸಹ ಮಧ್ಯಾಹ್ನ ೧೨ ಗಂಟೆಗೆ ಮಹಾ ರಥೋತ್ಸವ ನಡೆಯಲಿದ್ದು, ರಥೋತ್ಸವ ದೇವಸ್ಥಾನದಿಂದ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೆ ನಡೆಯಲಿದೆ.
    ರಥೋತ್ಸವಕ್ಕೂ ಮೊದಲು ಬೆಳಿಗ್ಗೆ ನವಗ್ರಹ ಹೋಮ, ಅಧಿವಾಸ ಹೋಮ, ರಥ ಶುದ್ಧಿಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ, ಸಂಜೆ ಅಷ್ಟಾವಧಾನ ಸೇವೆ, ಶಯನೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.
    ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಆಂಜನೇಯ ಸ್ವಾಮಿಯ ಮಿನಿ ಸಮುದಾಯ ಭವನ ಬೆಳಿಗ್ಗೆ ೧೦.೩೦ಕ್ಕೆ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಪೌರಾಯುಕ್ತ ಮನುಕುಮಾರ್, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಟಿ ನಾಗರಾಜ್, ಬಿ.ಎಂ ಮಂಜುನಾಥ್, ಆರ್. ಶ್ರೇಯಸ್, ಮಣಿ ಎಎನ್‌ಎಸ್, ದೇವಸ್ಥಾನ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಕೆ. ನರಸಿಂಹಮೂರ್ತಿ, ವೈದ್ಯ ಡಾ. ಎಚ್.ಡಿ ಅಶ್ವತ್ಥ ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

No comments:

Post a Comment