Tuesday, May 31, 2022

ವಿಜೃಂಭಣೆಯಿಂದ ಜರುಗಿದ ಶ್ರೀ ಮಾತಂಗಮ್ಮ, ಶ್ರೀ ಪ್ಲೇಗ್ ಮಾರಿಯಮ್ಮ ದೇವಿಯರ ರಾಜಬೀದಿ ಉತ್ಸವ ಮೆರವಣಿಗೆ

ಭದ್ರಾವತಿ ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪದಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ಪ್ಲೇಗ್ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಅಮ್ಮನವರ ರಾಜಬೀದಿ ಉತ್ಸವ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಮೇ. ೩೧: ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಸಮೀಪದಲ್ಲಿರುವ ಶ್ರೀ ಮಾತಂಗಮ್ಮ ದೇವಿ ಮತ್ತು ಶ್ರೀ ಪ್ಲೇಗ್ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಅಮ್ಮನವರ ರಾಜಬೀದಿ ಉತ್ಸವ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
    ಜಾನಪದ ಕಲಾತಂಡಗಳೊಂದಿಗೆ ಕೆ.ಸಿ ಬ್ಲಾಕ್ ಮುಖ್ಯ ರಸ್ತೆಗಳಲ್ಲಿ ಮತ್ತು ಎನ್‌ಟಿಬಿ ರಸ್ತೆ, ಲಿಂಗಾಯಿತರ ಬೀದಿ, ಕುರುಬರ ಬೀದಿ, ರಾಜಪ್ಪ ಲೇಔಟ್ ಸೇರಿದಂತೆ ವಿವಿಧೆಡೆ ಉತ್ಸವ ಮೆರವಣಿಗೆ ನಡೆಯಿತು. ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡಿರುವ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಜೂ.೧ರಂದು ಮಧ್ಯಾಹ್ನ ೧೨ ಗಂಟೆಗೆ ತಂಬಿಟ್ಟಿನ ಆರತಿ ತರುವುದು ಹಾಗು ಪಾನಕ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ.
    ರಾಜಬೀದಿ ಉತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಯುವ ಮುಖಂಡರಾದ ಎಂ.ಎ ಅಜಿತ್, ಬಿ.ಎಸ್ ಗಣೇಶ್, ಗುಣಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು, ಶ್ರೀ ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

No comments:

Post a Comment