Thursday, June 9, 2022

ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಣೆ

ಭದ್ರಾವತಿ ತಾಲೂಕಿನ ಅರಳಿಹಳ್ಳಿಯಲ್ಲಿರುವ ಶ್ರೀ ಸತ್ಯನಾರಾಯಣ ಎಜ್ಯುಕೇಷನ್ ಟ್ರಸ್ಟ್‌ನ ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
    ಭದ್ರಾವತಿ, ಜೂ. ೯: ತಾಲೂಕಿನ ಅರಳಿಹಳ್ಳಿಯಲ್ಲಿರುವ ಶ್ರೀ ಸತ್ಯನಾರಾಯಣ ಎಜ್ಯುಕೇಷನ್ ಟ್ರಸ್ಟ್‌ನ ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
    ಈ ಹಿಂದೆ ಹೊಸಮನೆ ಮುಖ್ಯ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಫಸ್ಟ್ ಸ್ಟೆಫ್ ಪೂರ್ವ ಪ್ರಾಥಮಿಕ ಶಾಲೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಶಾಲಾ ಮುಂಭಾಗದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
    ಪ್ರಗತಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು, ಶ್ರೀ ಸತ್ಯನಾರಾಯಣ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷರು, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗು ಮಕ್ಕಳು ಉಪಸ್ಥಿತರಿದ್ದರು.


No comments:

Post a Comment