Sunday, June 12, 2022

ಎಲ್ಲರೂ ಶಿಕ್ಷಣವಂತರಾಗುವ ಮೂಲಕ ಅಂಬೇಡ್ಕರ್ ಆಶಯ ಈಡೇರಿಸಲಿ : ಎ.ಕೆ ನಾಗೇಂದ್ರಪ್ಪ

ಭದ್ರಾವತಿ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ವತಿಯಿಂದ ಹೊಳೆಹೊನ್ನೂರು ರಸ್ತೆಯಲ್ಲಿರುವ ಕೆಜಿನ್ ವೃತ್ತದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಉದ್ಘಾಟಿಸಿದರು.
    ಭದ್ರಾವತಿ, ಜೂ. ೧೨: ವಿಶ್ವ ಜ್ಞಾನಿ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ನಮಗೆ ಜಗತ್ತಿನಲ್ಲಿಯೇ ಶ್ರೇಷ್ಠವಾದ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದು, ಸಂವಿಧಾನ ನಮ್ಮೆಲ್ಲರನ್ನೂ ಒಗ್ಗೂಡಿ ಬದುಕುವಂತೆ ಮಾಡಿದೆ. ಅಲ್ಲದೆ ಇದರಿಂದಾಗಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುವಂತಾಗಿದೆ. ಅಂಬೇಡ್ಕರ್‌ರವರ ಆಶಯದಂತೆ ಭವಿಷ್ಯದಲ್ಲಿ ಎಲ್ಲರೂ ಶಿಕ್ಷಣವಂತರಾಗಬೇಕಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಸಂಘ-ಸಂಸ್ಥೆಗಳ ಅವಶ್ಯಕತೆ ಹೆಚ್ಚಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ನಗರದ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ವತಿಯಿಂದ ಹೊಳೆಹೊನ್ನೂರು ರಸ್ತೆಯಲ್ಲಿರುವ ಕೆಜಿನ್ ವೃತ್ತದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಸರ್ವ ಜನಾಂಗದ ಶಾಂತಿಯ ತೋಟ ಎಂಬ ರಾಷ್ಟ್ರಕವಿ ಕುವೆಂಪುರವರ ನುಡಿಗೆ ಸಾರ್ಥಕತೆ ತಂದುಕೊಡುವ ಕೆಲಸವನ್ನು ಕೆಜಿಎನ್ ನೌಜವಾನ್ ಕಮಿಟಿ ಕೈಗೊಳ್ಳುತ್ತಿರುವುದು  ಶ್ಲಾಘನೀಯ.  ಎಲ್ಲಾ ಧರ್ಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
     ಎಲ್ಲಾ ಧರ್ಮದ ಸುಮಾರು ೪೦ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಆಮ್ ಆದ್ಮಿ ಪಾರ್ಟಿ ಮುಖಂಡ, ಸಮಾಜ ಸೇವಕ ಮಡಿಕಲ್ ಆನಂದ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್, ಸಿಆರ್‌ಪಿ ಇಮ್ತಿಯಾಜ್, ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ ಮುತುರ್ಜಾಖಾನ್, ಶಿಕ್ಷಕ ಮುನಿರ್ ಸಾಬ್, ಜಾವಿದ್ ಪಾಷ, ರೇಷ್ಮಾ ಬಾನು, ಉಪನ್ಯಾಸಕ ನಾಸಿರ್ ಖಾನ್, ಪತ್ರಕರ್ತ ಮುಜಾಸಿರ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೆಜಿಎನ್ ನೌಜವಾನ್ ಕಮಿಟಿ ಅಧ್ಯಕ್ಷ ಅಸಾದುಲ್ಲಾ ಅಧ್ಯಕ್ಷತೆ ವಹಿಸಿದ್ದರು.  ಸೋಫಿಯಾ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ನದೀಮ್ ಪಾಷ ಸ್ವಾಗತಿಸಿದರು. ಮುಸ್ವೀರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.  ಶಿಕ್ಷಕಿ ಬೀ ಬೀ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. ಮುಸ್ತಫಾ, ಇಮ್ರಾನ್, ಶಾಹಿದ್, ರಂಗಣ್ಣ, ಶಿವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ವತಿಯಿಂದ ಹೊಳೆಹೊನ್ನೂರು ರಸ್ತೆಯಲ್ಲಿರುವ ಕೆಜಿನ್ ವೃತ್ತದಲ್ಲಿ ಭಾನುವಾರ  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

No comments:

Post a Comment