ಕರ್ನಾಟಕ ಜನ ಸೈನ್ಯ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ
ಭದ್ರಾವತಿ ನಗರಸಭೆ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿರುವವರ ಹಾಗು ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ಜನ ಸೈನ್ಯ ಸಂಘಟನೆ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೬: ನಗರಸಭೆ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿರುವವರ ಹಾಗು ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ಜನ ಸೈನ್ಯ ಸಂಘಟನೆ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ನಗರಸಭೆ ವಾರ್ಡ್ ನಂ.೩೦ರ ವಿಶ್ವೇಶ್ವರಾಯ ಬಡಾವಣೆ (ಕೆಂಪೇಗೌಡ ಲೇಔಟ್)ಯಲ್ಲಿ ಆಶ್ರಯ ಯೋಜನೆ ಮನೆಗಳಿಗೆ ಮೀಸಲಿರುವ ನಗರಸಭೆಗೆ ಸೇರಿದ ಸುಮಾರು ೨ ಎಕರೆ ಜಾಗವಿದ್ದು, ಸ್ಥಳೀಯ ವ್ಯಕ್ತಿಯೊಬ್ಬರು ಈ ಜಾಗವನ್ನು ಕಬಳಿಸಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇದೆ ರೀತಿ ಬಿ.ಎಚ್ ರಸ್ತೆ ವಿಶಾಲ್ ಮಾರ್ಟ್ ಪಕ್ಕದಲ್ಲಿ ನದಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇವರ ವಿರುದ್ಧ ಸಹ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
ಕರ್ನಾಟಕ ಜನ ಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರಮುಖರಾದ ಬಿಸಿಯೂಟ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಹನುಮಮ್ಮ, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಧನಂಜಯ, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment