Sunday, June 19, 2022

ಗಾಣಿಗ ಸಮಾಜ ಸಂಘಟಿತವಾಗಲಿ : ಬಿ.ಕೆ ಮೋಹನ್

ಭದ್ರಾವತಿ ಹಳೇನಗರದ ನಗರದ ವೀರಶೈವ ಸಭಾ ಭವನದಲ್ಲಿ ಭಾನುವಾರ ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.
    ಭದ್ರಾವತಿ, ಜೂ. ೧೯: ಕ್ಷೇತ್ರದಲ್ಲಿ ಅಲ್ಪ ಪ್ರಮಾಣದಲ್ಲಿರುವ ಗಾಣಿಗ ಸಮುದಾಯದವರು ಹೆಚ್ಚು ಸಂಘಟಿತವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಕ್ತಿ ಮೀರಿ ಶ್ರಮಿಸಬೇಕೆಂದು ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಗೌರವಾಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
    ಅವರು ಭಾನುವಾರ ಹಳೇನಗರದ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಮೊದಲು ನಮ್ಮ ಸಮುದಾಯ ಬೆಳವಣಿಗೆ ಹೊಂದಬೇಕು. ಈ ನಿಟ್ಟಿನಲ್ಲಿ ಚಿಂತಿಸಿ ಸಂಘಟಿಸುವವರ ಅಗತ್ಯವಿದೆ. ಸಮುದಾಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾವು ಸಮಾಜದ ಇತರೆ ಸಮುದಾಯಗಳೊಂದಿಗೆ ಸಮಾನವಾಗಿ ಗುರುತಿಸಿಕೊಳ್ಳುವಂತಾಗಬೇಕೆಂದರು.
    ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ. ವಿಜಯ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಿ.ಕೆ ಜಗನ್ನಾಥ್, ಸಂಘದ ಜಿಲ್ಲಾ ಪ್ರಮುಖರಾದ ಮಾಜಿ ಅಧ್ಯಕ್ಷರಾದ ಎಸ್.ಎಸ್ ರುದ್ರಮುನಿ ಸಜ್ಜನ್, ಕೆ.ವಿ ಸಜ್ಜನ್ ಶೆಟ್ಟರ್, ಮಾಜಿ ಪ್ರಧಾನ ಕಾರ್ಯದರ್ಶಿ ಎ. ಅಶೋಕ್, ಜಿಲ್ಲಾ ಉಪಧ್ಯಕ್ಷ ಎನ್.ಬಿ ರಾಜಶೇಖರ್, ಕಾರ್ಯದರ್ಶಿ ಎಂ.ಆರ್ ಕಿರಣ್‌ಕುಮಾರ್, ಖಜಾಂಚಿ ಎ.ಎಸ್ ರವಿ, ನಿರ್ದೇಶಕರಾದ ಕೆ.ಪಿ ರವೀಶ್, ಸಿ.ಎಸ್ ಚನ್ನಬಸವರಾಜ್, ರೇಖಾ ರಾಜ್‌ಶೇಖರ್, ಚನ್ನವೀರೇಶ್, ಸುಜಾತ, ಬಸವರಾಜ್ ಹೊಸಮನಿ, ಮಹೇಶ್‌ಕುಮಾರ್, ಸಿ.ಎಂ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಾಗೀಶ್ ಕೋಠಿ ನಿರೂಪಿಸಿದರು.
    ನೂತನ ಪದಾಧಿಕಾರಿಗಳು :
    ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಗೌರವಾಧ್ಯಕ್ಷರಾಗಿ ಬಿ.ಕೆ ಮೋಹನ್, ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್, ಉಪಾಧ್ಯಕ್ಷರಾಗಿ ಎಂ. ಮಹಾದೇವಪ್ಪ, ಜೆ. ನಂದೀಶ್, ಕಾರ್ಯದರ್ಶಿಯಾಗಿ ಶಿವಾನಂದ, ನಿರ್ದೇಶಕರಾಗಿ ನಾಗರಾಜ, ಪ್ರದೀಪ್, ಜಿ.ಕೆ ವೀರೇಶ್, ಜಿ.ಪಿ ಚನ್ನೇಶ್ ಹಾಗು ಮಹಿಳಾ ನಿರ್ದೇಶಕರಾಗಿ ರೇಣುಕ ರುದ್ರೇಶ್ ಆಯ್ಕೆಯಾದರು.


ಭದ್ರಾವತಿ ತಾಲೂಕು ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಟಿ.ಎಸ್ ಆನಂದಕುಮಾರ್ ಭಾನುವಾರ ನಡೆದ ಸಭೆಯಲ್ಲಿ ಆಯ್ಕೆಯಾದರು.

No comments:

Post a Comment