Wednesday, June 29, 2022

ಏಕಾಏಕಿ ಸರ್ಕಾರಿ ಜಮೀನಿನಲ್ಲಿ ಅಕ್ರಮ ನಿವೇಶನ, ಮನೆ

ತಹಸೀಲ್ದಾರ್ ನೇತೃತ್ವದ ತಂಡದಿಂದ ತೆರವು ಕಾರ್ಯಾಚರಣೆ

ಭದ್ರಾವತಿ ತಾಲೂಕಿನ ತಾವರೆಘಟ್ಟ ಗ್ರಾಮದ ಸರ್ವೆ ನಂ.೧೪ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ನಿವೇಶನ ಹಾಗು ಮನೆ ತೆರವುಗೊಳಿಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಬುಧವಾರ ಯಶಸ್ವಿಯಾಗಿದೆ.
    ಭದ್ರಾವತಿ, ಜೂ. ೨೯: ತಾಲೂಕಿನ ತಾವರೆಘಟ್ಟ ಗ್ರಾಮದ ಸರ್ವೆ ನಂ.೧೪ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ನಿವೇಶನ ಹಾಗು ಮನೆ ತೆರವುಗೊಳಿಸುವಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಬುಧವಾರ ಯಶಸ್ವಿಯಾಗಿದೆ.
    ಕಳೆದ ಕೆಲವು ದಿನಗಳ ಹಿಂದೆ ಸರ್ಕಾರಿ ಜಮೀನಿನಲ್ಲಿ ಏಕಾಕಿ ನಿವೇಶನ ಹಾಗು ಮನೆ ನಿರ್ಮಿಸಿಕೊಂಡಿದ್ದು, ಈ ಮಾಹಿತಿ ತಿಳಿದ ತಕ್ಷಣ ಸೂಕ್ತ ದಾಖಲೆ ಪತ್ರಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಕೈಗೊಂಡು ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಯಿತು.


    ಕಾರ್ಯಾಚರಣೆಯಲ್ಲಿ ತಾವರಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರು, ಕಂದಾಯ ನಿರೀಕ್ಷಕ ಸತೀಶ್, ರಘು ಹಾಗು ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

No comments:

Post a Comment