Monday, June 20, 2022

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಜಾಗೃತಿ ಜಾಥಾ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ಭದ್ರಾವತಿ ಯೋಗ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೨೦ : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ಯೋಗ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಚಾಲನೆ ನೀಡಿದರು. ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.
     ನಗರಸಭೆ ಪೌರಾಯುಕ್ತ ಮನುಕುಮಾರ್, ಆಯುಷ್ ಇಲಾಖೆ ವೈದ್ಯರಾದ ಡಾ. ರವಿಶಂಕರ್, ಡಾ. ದಿವ್ಯಜ್ಯೋತಿ, ಡಾ. ಸುರೇಂದ್ರ, ಡಾ.ನರಸಿಂಹಮೂರ್ತಿ, ಡಾ. ವಿಜಯವಾಣಿ, ಡಾ. ವಿಜಯಲಕ್ಷ್ಮಿ, ಡಾ. ನಿರುಪಮಾ, ಯೋಗ ಸಂಯೋಜಕ ಮಹೇಂದ್ರ, ಗ್ರೇಡ್- ೨ ತಹಶೀಲ್ದಾರ್ ಪದ್ಮನಾಭ ಭಟ್, ದೈಹಿಕ ಶಿಕ್ಷಕರ ಮೇಲ್ವಿಚಾರಣಾಧಿಕಾರಿ ಪ್ರಭು, ಪತಂಜಲಿ ಯೋಗ ಸಮಿತಿಯ ಅನ್ನಪೂರ್ಣ ಸತೀಶ್, ಡಾ.ವೀಣಾ ಭಟ್, ಹಾ. ರಾಮಪ್ಪ, ಚನ್ನಪ್ಪ, ಜಂಗಮಪ್ಪ, ಎ.ಜಿನನಾಗರಾಜ್, ಮಲ್ಲಿಕಾರ್ಜುನ. ಸತ್ಯಣ್ಣ, ಸುಭಾಷ್, ಕೃಷ್ಣಮೂರ್ತಿ, ಗೌರಮ್ಮ, ಜಾನಕಮ್ಮ, ವಾಣಿಶ್ರೀ, ಕವಿತಾ, ಶ್ಯಾಮಲಾ ಹಾಗು ನಗರಸಭೆ, ಆಯುಷ್ ಇಲಾಖೆ, ತಾಲೂಕು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ :
    ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜೂ.೨೧ರಂದು ಬೆಳಿಗ್ಗೆ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ಮತ್ತು ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ ಸಹಯೋಗದೊಂದಿಗೆ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು, ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ಆರ್. ಪ್ರದೀಪ್ ಕೋರಿದ್ದಾರೆ.

No comments:

Post a Comment