Wednesday, June 29, 2022

ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬುಧವಾರ ಭದ್ರಾವತಿ ಮಾಧವಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜೂ. ೨೯ : ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಬುಧವಾರ ನಗರದ ಮಾಧವಚಾರ್ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
    ಪಕ್ಷದ ಪ್ರಮುಖರು ಮಾತನಾಡಿ, ರಾಜಸ್ತಾನದ ಉದಯಪುರದಲ್ಲಿ ನೂಪುರ್ ಶರ್ಮಾ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿ ಪೋಸ್ಟ್ ಮಾಡಿದ ಕಾರಣಕ್ಕೆ ಕನ್ನಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿರುವುದು ಖಂಡನೀಯ, ದೇಶದಲ್ಲಿ ಹಿಂದುಗಳು ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕೊಲೆ ಆರೋಪಿಗಳನ್ನು ಬಂಧಿಸಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಪ್ರಮುಖರಾದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಪ್ರಧಾನ ಕಾರ್ಯದರ್ಶಿ ಚನ್ನೇಶ್, ಯುವ ಘಟಕದ ಅಧ್ಯಕ್ಷ ವಿಜಯ್ ಸಿದ್ದಾಥ್, ಎಸ್.ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್‌ರಾವ್, ವಿ. ಕದಿರೇಶ್, ಎಸ್. ಕುಮಾರ್, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ನಕುಲ್, ಗೋಕುಲ್ ಕೃಷ್ಣ, ಧನುಷ್ ಬೋಸ್ಲೆ, ಮಹಿಳಾ ಪ್ರಮುಖರಾದ ಶೋಭಾ ಪಾಟೀಲ್, ಗೌರಮ್ಮ, ಮಂಜುಳಾ, ಶಕುಂತಲಾ, ಅನುಷಾ, ಕವಿತಾ ಸುರೇಶ್, ರೇಖಾ ಪದ್ಮಾವತಿ, ಅನ್ನಪೂರ್ಣ, ಹೇಮಾವತಿ ವಿಶ್ವನಾಥ್, ಕವಿತಾರಾವ್, ಲೋಲಾಕ್ಷಿ, ಭಾಗಿರತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment