Thursday, June 9, 2022

ವಿಇಎಸ್ ವಿದ್ಯಾಸಂಸ್ಥೆ ಪದನಿಮಿತ್ತ ಅಧ್ಯಕ್ಷರಾಗಿ ಬಿ. ಸಿದ್ದಬಸಪ್ಪ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷರಾಗಿ ಆಯ್ಕೆಯಾದ ಬಿ. ಸಿದ್ದಬಸಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜೂ. ೯: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷರಾಗಿ ಬಿ. ಸಿದ್ದಬಸಪ್ಪ ಆಯ್ಕೆಯಾಗಿದ್ದಾರೆ.
    ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ಬೈಲಾ ಸಮಗ್ರ ತಿದ್ದುಪಡಿಯಾದ ಹಿನ್ನಲೆಯಲ್ಲಿ ಗೌರವಾಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಉಪಾಧ್ಯಕ್ಷರಾಗಿ ಡಿ. ನಾಗರತ್ನ, ಕಾರ್ಯದರ್ಶಿಯಾಗಿ ಡಿ.ಎಸ್ ರಾಜಪ್ಪ ಹಾಗು ಖಜಾಂಚಿಯಾಗಿ ಎಸ್.ಕೆ ಮೋಹನ್ ಮತ್ತು ಕಾರ್ಯಾಧ್ಯಕ್ಷರಾಗಿ ಬಿ.ಎಲ್ ರಂಗಸ್ವಾಮಿ ಆಯ್ಕೆಯಾಗಿದ್ದಾರೆ.
    ಉಳಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಯ ಚುನಾಯಿತ ನಿರ್ದೇಶಕರು, ವಿದ್ಯಾಸಂಸ್ಥೆಯ ಅಜೀವ ಸದಸ್ಯ/ಕಾಯಂ ಸದಸ್ಯರು ಪದನಿಮಿತ್ತ ನಿರ್ದೇಶಕರುಗಳಾಗಿದ್ದಾರೆ.

No comments:

Post a Comment