Monday, June 13, 2022

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪೆನ್ನು, ನೋಟ್ ಪುಸ್ತಕ ವಿತರಣೆ

ದಿ ಶಿವಮೊಗ್ಗ ಮಲ್ಟಿಪಪ೯ಸ್ ಸೋಷಿಯಲ್ ಸರ್ವೀಸ್ ಸೊಸೈಟಿ ಸಹಕಾರದೊಂದಿಗೆ ಸ್ತ್ರೀ ಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಭದ್ರಾವತಿ ನಗರಸಭೆ ವ್ಯಪ್ತಿಯ ಬೊಮ್ಮನಕಟ್ಟೆ ಸಕಾ೯ರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ಪೆನ್ನು ಹಾಗು ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ, ಜೂ. ೧೩ : ದಿ ಶಿವಮೊಗ್ಗ ಮಲ್ಟಿಪಪ೯ಸ್ ಸೋಷಿಯಲ್ ಸರ್ವೀಸ್ ಸೊಸೈಟಿ ಸಹಕಾರದೊಂದಿಗೆ ಸ್ತ್ರೀ ಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ನಗರಸಭೆ ವ್ಯಪ್ತಿಯ ಬೊಮ್ಮನಕಟ್ಟೆ ಸಕಾ೯ರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ಪೆನ್ನು ಹಾಗು ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
    ಕಾರ್ಯಕ್ರಮದಲ್ಲಿ ಸೊಸೈಟಿ ನಿದೇ೯ಶಕರಾದ ಕ್ಲೆಮೆಟ್ ಪಿಂಟೋ ಮತ್ತು ಸಿಸ್ಟರ ಪ್ರೇಮಲತಾ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ, ಮುಖ್ಯೋಪಾಧ್ಯಾಯಿನಿ ಗಿರಿಜಮ್ಮ, ಪ್ರೇಮಮ್ಮ,  ಪ್ರಮೀಳ, ಷಣ್ಮುಖಪ್ಪ, ವಿಶ್ವನಾಥ್, ಸುಜಾತ ಹಾಗು ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಅಡುಗೆ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಿಕ್ಷಕ ಎ. ತಿಪ್ಪೇಸ್ವಾಮಿ ಸ್ವಾಗತಿಸಿ ವಂದಿಸಿದರು.

No comments:

Post a Comment