ಭದ್ರಾವತಿ ಸಿದ್ದರೂಢನಗರದ ಶಂಕರಮಠ ಸಮೀಪದಲ್ಲಿ ಎಚ್.ಎಸ್ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್, ಶಂಕರ್ ಸಾ ಮಿಲ್, ಶೃಶಿ ಕ್ಲಾಮ್ಸ್ ಮತ್ತು ಸಂಸ್ಥಾನ ಪ್ರಾಪರ್ಟಿ ಗ್ರೂಪ್ಸ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯುರೋ ಕಿಡ್ಸ್ ಶಾಲೆಯ ಕಟ್ಟಡವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಉದ್ಘಾಟಿಸಿದರು.
ಭದ್ರಾವತಿ, ಜೂ. ೧೫: ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳಲ್ಲಿನ ಕೌಶಲ್ಯಗಳನ್ನು ಗುರುತಿಸಲು ಸಹಕಾರಿಯಾಗಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಅವರು ಬುಧವಾರ ಸಿದ್ದರೂಢನಗರದ ಶಂಕರಮಠ ಸಮೀಪದಲ್ಲಿ ಎಚ್.ಎಸ್ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್, ಶಂಕರ್ ಸಾ ಮಿಲ್, ಶೃಶಿ ಕ್ಲಾಮ್ಸ್ ಮತ್ತು ಸಂಸ್ಥಾನ ಪ್ರಾಪರ್ಟಿ ಗ್ರೂಪ್ಸ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯುರೋ ಕಿಡ್ಸ್ ಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತಾಯಿಯ ಗರ್ಭದಲ್ಲಿರುವಾಗಲೇ ಜ್ಞಾನದ ಕೌಶಲ್ಯಗಳನ್ನು ಹೊಂದಿರುತ್ತವೆ ಎಂಬುದನ್ನು ಮಹಾಭಾರತ ಸೇರಿದಂತೆ ಹಲವು ಪುರಾಣ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ನಾವುಗಳು ಇವುಗಳ ಮೇಲೆ ನಂಬಿಕೆ ಹೊಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಪುರಾಣ ಗ್ರಂಥಗಳಲ್ಲಿ ಉಲ್ಲೇಖವಾಗಿರುವುದು ದೃಢವಾಗುತ್ತಿದೆ. ಚಿಕ್ಕಮಕ್ಕಳಲ್ಲಿನ ಕೌಶಲ್ಯಗಳನ್ನು ಸಹ ಗುರುತಿಸಬೇಕೆಂಬ ಮನೋಭಾವನೆ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಹೆಚ್ಚು ಸಹಕಾರಿಯಾಗಿವೆ. ಮಕ್ಕಳ ಉತ್ತಮ ಶಿಕ್ಷಣಕ್ಕೆ ಪೂರಕವಾದ ಕಲಿಕೆಗಳು ಈ ಶಾಲೆಗಳಲ್ಲಿ ನಡೆಯುವಂತಾಗಬೇಕು. ಹೊಸ ಶಿಕ್ಷಣ ನೀತಿಯ ಉದ್ದೇಶ ಸಹ ಇದೆ ಆಗಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಆರ್. ಶ್ರೇಯಸ್(ಚಿಟ್ಟೆ), ಶಾಲೆಯ ಅಧ್ಯಕ್ಷ ಎಚ್.ಎಸ್ ಶಂಕರ್, ಕಾರ್ಯದರ್ಶಿ ಆರ್. ದೀಪ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಚಿವರು ಶಾಲಾ ಮಕ್ಕಳಿಗೆ ಬ್ಯಾಗ್ಗಳನ್ನು ವಿತರಿಸಿದರು. ಅಲ್ಲದೆ ಒಂದೂವರೆ ವರ್ಷವಿರುವಾಗಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ದಿಶಾಂಕ್ ಮಲ್ಲಿಕಾರ್ಜುನ ಪುಟಾಣಿ ಮಗುವನ್ನು ಸನ್ಮಾನಿಸಿ ಗೌರವಿಸಿದರು.
ಒಂದೂವರೆ ವರ್ಷವಿರುವಾಗಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ದಿಶಾಂಕ್ ಮಲ್ಲಿಕಾರ್ಜುನ ಪುಟಾಣಿ ಮಗುವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಸನ್ಮಾನಿಸಿ ಗೌರವಿಸಿದರು.
No comments:
Post a Comment