Monday, June 20, 2022

ನಗರದೆಲ್ಲೆಡೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಹುಟ್ಟುಹಬ್ಬ ಅದ್ದೂರಿ ಆಚರಣೆ

ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
    ಭದ್ರಾವತಿ, ಜೂ. ೨೦ : ಕ್ಷೇತ್ರದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಹುಟ್ಟುಹಬ್ಬವನ್ನು ಸೋಮವಾರ ನಗರದೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಯಿತು. ಎಲ್ಲೆಡೆ ಹಬ್ಬದ ವಾತಾವರಣ ಕಂಡು ಬಂದಿತು.
    ಕ್ಷೇತ್ರದಲ್ಲಿ ೩ ಬಾರಿ ಶಾಸಕರಾಗಿ ಅಭಿವೃದ್ಧಿ ಕಾರ್ಯಗಳ ಜೊತೆಗೆ ಜನಸಾಮಾನ್ಯರ ಮನಸ್ಸಿನಲ್ಲಿ ಇಂದಿಗೂ ಅಚ್ಚಳಿಯದಂತೆ ಉಳಿದುಕೊಂಡು ಕಣ್ಮರೆಯಾಗಿರುವ ಎಂ.ಜೆ ಅಪ್ಪಾಜಿಯವರು ತಮ್ಮದೇ ಆದ ವರ್ಚಸ್ಸನ್ನು, ಅಭಿಮಾನಿ ಹಾಗು ಕಾರ್ಯಕರ್ತರ ಬಳಗವನ್ನು ಹೊಂದಿದ್ದಾರೆ. ಇವರ  ಹುಟ್ಟುಹಬ್ಬವನ್ನು ಕುಟುಂಬ ವರ್ಗದವರು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಜನಪ್ರತಿನಿಧಿಗಳು, ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುವ ಮೂಲಕ ಬೆರಗುಗೊಳಿಸಿದರು.
    ಬೆಳಿಗ್ಗೆ ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಯವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮಾಂತರ ಹಾಗು ನಗರ ಪ್ರದೇಶದ ವಿವಿಧೆಡೆ ಅಪ್ಪಾಜಿಯವರ ಹಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಂಜೆ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
    ಶಾರದ ಅಪ್ಪಾಜಿ ಹಾಗು ಪ್ರಮುಖರು ಅಪ್ಪಾಜಿ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪನಮನ ಸಲ್ಲಿಸಿ ಕೇಕ್ ಕತ್ತರಿಸಿ, ಸಿಹಿ ವಿತರಿಸಲಾಯಿತು. ಅಲ್ಲದೆ ಅನ್ನಸಂತರ್ಪಣೆ ಸಹ ನೆರವೇರಿತು. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಜನಪ್ರತಿನಿಧಿಗಳು, ಅಭಿಮಾನಿಗಳು ಪಾಲ್ಗೊಂಡಿದ್ದರು.

No comments:

Post a Comment