Wednesday, June 1, 2022

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಪರವಾದ ಸರ್ಕಾರ

ಸೇವೆ ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮಕ್ಕೆ ಚಾಲನೆ


ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ೮  ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮತ್ತು ತಾಲೂಕು ಬಿಜೆಪಿ ಮಂಡಲ ವತಿಯಿಂದ (ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ) ರೈತ ಫಲಾನುಭವಿಗಳ ಸಭೆ ಬುಧವಾರ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆಯಿತು.
     ಭದ್ರಾವತಿ, ಜೂ. ೧:  ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ೮  ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮತ್ತು ತಾಲೂಕು ಬಿಜೆಪಿ ಮಂಡಲ ವತಿಯಿಂದ (ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ) ರೈತ ಫಲಾನುಭವಿಗಳ ಸಭೆ ಬುಧವಾರ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆಯಿತು.
    ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಮಾತನಾಡಿ,  ಕೇಂದ್ರ ಸರ್ಕಾರ ರೈತರ ಪರವಾದ ಸರ್ಕಾರವಾಗಿದೆ. ರೈತರಿಗಾಗಿ ಕಿಸಾನ್ ಸಮ್ಮಾನ್, ಕೃಷಿ ವಿಕಾಸ್, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ, ಪ್ರಧಾನ ಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್, ಫಸಲು ಭೀಮಾ, ಸಾಯಿಲ್ ಹೆಲ್ತ್‌ಕಾರ್ಡ್ ಸೇರಿದಂತೆ  ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸದುಪಯೋಗ ರೈತರು ಪಡೆದುಕೊಳ್ಳಬೇಕೆಂದರು.
    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಬಿ. ಕೆ ಶ್ರೀನಾಥ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಮಚಂದ್ರ ಸಾಲೆಕೊಪ್ಪ, ತಾಲೂಕು ಮಂಡಲ ಅಧ್ಯಕ್ಷ  ಎಂ. ಪ್ರಭಾಕರ್, ಜಿಲ್ಲಾ ಕಾರ್ಯದರ್ಶಿ ಎನ್.ಡಿ  ಸತೀಶ್, ಪ್ರಮುಖರಾದ ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್ ಕುಮಾರ್, ಬಿಜೆಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ನಗರಸಭಾ ಸದಸ್ಯರಾದ ಶಶಿಕಲಾ, ಅನ್ನಪೂರ್ಣ, ತೀರ್ಥಯ್ಯ, ಚಂದ್ರಪ್ಪ, ರಾಮನಾಥ್ ಬರ್ಗೆ, ರೈತ ಮೋರ್ಚಾ ತಾಲೂಕು ಕಾರ್ಯದರ್ಶಿಗಳಾದ ಬಿ.ವಿ ಸಂತೋಷ್, ಕೆ.ಆರ್ ಆನಂದ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ರೈತ ಮೋರ್ಚಾ ತಾಲೂಕು ಅಧ್ಯಕ್ಷ ನಾಗರಾಜ್ ಅಂಬೋರೆ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಕಾರ್ಯಕರ್ತರು, ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.

No comments:

Post a Comment