Saturday, June 11, 2022

ಏಕಾಏಕಿ ಬೆಂಕಿ : ನಡುರಸ್ತೆಯಲ್ಲಿಯೇ ಸುಟ್ಟು ಕರಕಲಾದ ವಾಹನ

ಚಲಿಸುತ್ತಿದ್ದ ಓಮ್ನಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಡು ರಸ್ತೆಯಲ್ಲಿಯೇ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಭದ್ರಾವತಿ ತಾಲೂಕಿನ ಬಿಆರ್‌ಪಿ ಗೋಣಿಬೀಡು ಸಮೀಪ ನಡೆದಿದೆ.
    ಭದ್ರಾವತಿ, ಜೂ. ೧೧: ಚಲಿಸುತ್ತಿದ್ದ ಓಮ್ನಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ನಡು ರಸ್ತೆಯಲ್ಲಿಯೇ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಶನಿವಾರ ತಾಲೂಕಿನ ಬಿಆರ್‌ಪಿ ಗೋಣಿಬೀಡು ಸಮೀಪ ನಡೆದಿದೆ.
    ತರೀಕೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಓಮ್ನಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಮಹಮದ್ ಅರ್ಷದ್ ಓಮ್ನಿ ವಾಹನದಿಂದ ಕೆಳಗೆ ಇಳಿದು ಹೊರ ಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವಾಹನವನ್ನು ಸಂಪೂರ್ಣವಾಗಿ ವ್ಯಾಪಿಸಿಕೊಂಡಿದ್ದು, ತಕ್ಷಣ ಸ್ಥಳೀಯರು ಅಗ್ನಿ ನಂದಿಸಲು ಮುಂದಾಗಿದ್ದಾರೆ. ಆದರೂ ಅಗ್ನಿ ಮತ್ತಷ್ಟು ವ್ಯಾಪಕಗೊಂಡ ಹಿನ್ನಲೆಯಲ್ಲಿ ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
    ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್, ಸಿಬ್ಬಂದಿಗಳಾದ ಸುಬ್ರಮಣ್ಯ, ಶ್ರೀನಿವಾಸ್, ವಿನೂತನ್, ಕರಿಯಣ್ಣ ಮತ್ತು ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.



No comments:

Post a Comment