ಭದ್ರಾವತಿ ತಾಲೂಕಿನ ಅರಬಿಳಿಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಜೂ. ೧೮: ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಬೆಳೆಸಬೇಕೆಂದು ತಾಲೂಕಿನ ಕೂಡ್ಲಿಗೆರೆ ಉಪ ವಲಯ ಅರಣ್ಯಾಧಿಕಾರಿ ಶಫಿ ಉಲ್ಲಾ ಹೇಳಿದರು.
ಅವರು ತಾಲೂಕಿನ ಅರಬಿಳಿಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮನುಷ್ಯನಿಗೂ ಪ್ರಾಣ ವಾಯು ಆಮ್ಲಜನಕ ಅತಿ ಅವಶ್ಯಕವಾಗಿದ್ದು, ಶುದ್ಧ ಆಮ್ಲಜನಿಕ ಪಡೆಯಲು ಸಸಿಗಳನ್ನು ಹೆಚ್ಚು ಹೆಚ್ಚಾಗಿ ನೆಡುವುದು ಅವಶ್ಯಕವಾಗಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ, ಎಸ್ಡಿಎಂಸಿ ಅಧ್ಯಕ್ಷ ಆರ್. ವೀರಾಚಾರಿ ಹಾಗು ಮೇಲುಸ್ತುವಾರಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment