ಜಯದೇವ
ಭದ್ರಾವತಿ, ಜು. ೧೦ : ಭಾರತೀಯ ಜನತಾ ಪಕ್ಷದ ಹಿರಿಯೂರು ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಜಯದೇವ(೫೧) ಶನಿವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಹೊಂದಿದ್ದರು. ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಭಾನುವಾರ ಗ್ರಾಮದ ಸ್ಮಶಾನ ಭೂಮಿಯಲ್ಲಿ ನೆರವೇರಿತು. ಸಂಸದ ಬಿ ವೈ ರಾಘವೇಂದ್ರ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮ ಪ್ರಸಾದ್, ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಯುವ ಮುಖಂಡ ಗೋಕುಲ್ ಕೃಷ್ಣ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.
No comments:
Post a Comment