Wednesday, July 13, 2022

ಸರ್ಕಾರಿ ಶಾಲೆಗೆ ಆಟದ ಮೈದಾನಕ್ಕೆ ಜಾಗ ಕಲ್ಪಿಸಲು ಮನವಿ

ಭದ್ರಾವತಿ ತಾಲೂಕಿನ ಕಲ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟದ ಮೈದಾನಕ್ಕೆ ಜಾಗ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಬುಧವಾರ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಅವರ ಮೂಲಕ ತಾಲೂಕು ಆಡಳಿತಕ್ಕೆ ಜೈ ಸೇವಾಲಾಲ್ ಯುವಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಜು. ೧೩: ತಾಲೂಕಿನ ಕಲ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟದ ಮೈದಾನಕ್ಕೆ ಜಾಗ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಬುಧವಾರ ಉಪವಿಭಾಗಾಧಿಕಾರಿ ಎಸ್.ಬಿ ದೊಡ್ಡಗೌಡರ್ ಅವರ ಮೂಲಕ ತಾಲೂಕು ಆಡಳಿತಕ್ಕೆ ಜೈ ಸೇವಾಲಾಲ್ ಯುವಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
      ಶಾಲೆಗೆ ಯಾವುದೇ ಆಟದ ಮೈದಾನ ಇಲ್ಲದ ಕಾರಣ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಅದರಲ್ಲೂ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರು ಹೆಚ್ಚಾಗಿ ವಾಸಿಸುತ್ತಿದ್ದು, ಆಟದ ಮೈದಾನ ಕಲ್ಪಿಸಿ ಕೊಡುವಂತೆ ಕೋರಲಾಗಿದೆ. ಮನವಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಸಲ್ಲಿಸಲಾಯಿತು.
      ತಹಸೀಲ್ದಾರ್ ಆರ್. ಪ್ರದೀಪ್, ಸಂಘದ ಅಧ್ಯಕ್ಷ ಪ್ರವೀಣ್‌ನಾಯ್ಕ, ಉಪಾಧ್ಯಕ್ಷ ಗುಂಡಾ, ಪ್ರಧಾನ ಕಾರ್ಯದರ್ಶಿ ಪವನ್‌ಕುಮಾರ್, ಪದಾಧಿಕಾರಿಳಾದ ರಾಕೇಶ್, ರಮೇಶ್, ಕಿರಣ್ ಮತ್ತು ಕುಮಾರ್ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment