ಭದ್ರಾವತಿ, ಜು.14: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ 41ನೇ ಬಾರಿಗೆ ಪೂರ್ಣಗೊಂಡಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಜಲಾಶಯದಿಂದ ನೀರು ನದಿಗೆ ಬಿಡಲಾಯಿತು.
4 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡಲಾಯಿತು. ಜಲಾಶಯದಿಂದ ಹಾಲ್ನೊರೆಯಂತೆ ನೀರು ಧುಮುಕುವ ದೃಶ್ಯ ಕಣ್ತುಂಬಿಕೊಳ್ಳಲು ತಾಲೂಕಿನ ವಿವಿಧತೆಗಳಿಂದ ಜನರು ಆಗಮಿಸಿದ್ದರು. ಕೆಲವರು ವಿಡಿಯೋ ಚಿತ್ರೀಕರಣ ಮಾಡಿಕೊಂಡರು, ಇನ್ನೂ ಕೆಲವರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಸಂಭ್ರಮಿಸಿದರು.
No comments:
Post a Comment