ಸೋಮವಾರ, ಜುಲೈ 11, 2022

ಪ್ರೋತ್ಸಾಹಧನ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಭದ್ರಾವತಿ, ಜು. ೧೧ : ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ತಾಲೂಕಿನ ಕ್ಷತ್ರಿಯ ಮರಾಠ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಪ್ರತಿಭಾ ಪುರಸ್ಕಾರ ನೀಡಲು ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
      ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಅಂತಿಮ ಪದವಿ, ಸ್ನಾತಕೋತ್ತರ ಪದವಿ ಹಾಗೂ ಅಂತಿಮ ಇಂಜಿನಿಯರಿಂಗ್ ತರಗತಿಗಳಲ್ಲಿ ಶೇ.೯೦ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶೇ.೬೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.
      ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಇತ್ತೀಚಿನ ಎರಡು ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ನಗರದ ಚನ್ನಗಿರಿ ರಸ್ತೆಯ ಭವಾನಿ ಕಾಂಪ್ಲೆಕ್ಸ್‌ನಲ್ಲಿರುವ ಸಂಘದ ಕಛೇರಿಗೆ ಜು.೩೦ ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಮೊ: ೯೪೪೯೧೫೯೯೭೭ ಅಥವಾ ೬೩೬೧೭೪೬೧೦೮ ಸಂಖ್ಯೆಗೆ ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ಸಚಿನ್‌ಸಿಂದ್ಯಾ ಕೋರಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ