Tuesday, July 19, 2022

‎ಮಣ್ಣು ಕುಸಿತಗೊಂಡ ಭದ್ರಾ ಜಲಾಶಯ ಮುಖ್ಯ ಕಾಲುವೆ ಸ್ಥಳಕ್ಕೆ ಪವಿತ್ರ ರಾಮಯ್ಯ ಭೇಟಿ

ಸರ್ಕಾರದಿಂದ 2.15 ಕೋಟಿ ಬಿಡುಗಡೆ ಮಳೆ ಕಾಲ ಮುಕ್ತಾಯಗೊಂಡ ನಂತರ ಕಾಮಗಾರಿ ಆರಂಭ

ಭದ್ರಾವತಿ, ಜು. 19: ಭದ್ರಾ ಜಲಾಶಯ ಸಮೀಪ ಮುಖ್ಯ ಕಾಲುವೆಯಲ್ಲಿ ಮಣ್ಣು ಕುಸಿತಗೊಂಡಿರುವ ಸ್ಥಳಕ್ಕೆ ಮಂಗಳವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು.
     ದುರಸ್ತಿ   ಕಾಮಗಾರಿಗೆ ಸರಕಾರದಿಂದ 2.15 ಕೋ. ರು. ಬಿಡುಗಡೆಯಾಗಿದ್ದು, ಜಲಾಶಯದ ಕ್ರಸ್ಟ್ ಗೇಟ್ ಗಳ ಮೂಲಕ  ಹೆಚ್ಚಿನ ನೀರು ನದಿಗೆ ಹರಿಯುತ್ತಿರುವುದರಿಂದ ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ.  ಮಳೆಗಾಲ ಕಳೆದ ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸುವುದರಿಂದ ತಿಳಿಸಿದರು. 
      ಜಲಾಶಯ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು,  ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಣ್ಣು ಕುಸಿತಗೊಂಡಿರುವ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಸೂಚನಾ ಫಲಕ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
      ಭದ್ರಾ ಜಲಾಶಯದ  ಕಾರ್ಯಪಾಲಕ ಅಭಿಯಂತರ ಜಗದೀಶ್  ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment