Sunday, July 10, 2022

ಎಸ್‌.ಎಸ್‌ ಜ್ಯೂಯಲರ್ಸ್‌ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ

ಕೋಟ್ಯಾಂತರ ರು. ಮೌಲ್ಯದ ಚಿನ್ನಾಭರಣ ಕಳವು

\

ಭದ್ರಾವತಿ, ಜು. ೧೦: ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿರುವ ಎಸ್.ಎಸ್ ಜ್ಯೂಯಲರ್ಸ್ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು, ಕೋಟ್ಯಾಂತರ ರು. ಮೌಲ್ಯದ ಬೆಳ್ಳಿ ಹಾಗು ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
      ಮಳಿಗೆಯ ಹಿಂಬದಿಯ ಗೋಡೆ ಹಾಗು ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ. ಈ ಮಳಿಗೆ ವಿಕ್ರಂ ಮತ್ತು ವಿಜಿಯ ಎಂಬ ಸಹೋದರರಿಗೆ ಸೇರಿದ್ದಾಗಿದೆ.
      ಸ್ಥಳದಲ್ಲಿ ಗ್ಯಾಸ್‌ ಕಟರ್‌ ಸೇರಿದಂತೆ ಕಳ್ಳತನಕ್ಕೆ ಬಳಸಲಾಗಿರುವ ವಸ್ತುಗಳು ಪತ್ತೆಯಾಗಿವೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಮತ್ತು ಫೋರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಅಮಾತೆ ಹಾಗು ಹಳೇನಗರ ಪೊಲೀಸ್‌ ಠಾಣೆ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

No comments:

Post a Comment