Sunday, July 31, 2022

ಪ್ರಸಿದ್ದ ವೈದ್ಯ ಡಾ. ಸೆಲ್ವರಾಜ್ ನಿಧನ

ಡಾ. ಸೆಲ್ವರಾಜ್
    ಭದ್ರಾವತಿ, ಜು. ೩೧: ನಗರದ ಜನ್ನಾಪುರದ ಪ್ರಸಿದ್ದ ವೈದ್ಯ ಡಾ. ಸೆಲ್ವರಾಜ್(೬೬) ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಸುಮಾರು ೪ ದಶಕಗಳ ಹಿಂದೆ ಜನ್ನಾಪುರ ಕುರುಬರ ಬೀದಿಯಲ್ಲಿ ಶಿವ ಕ್ಲಿನಿಕ್ ಆರಂಭಿಸುವ ಮೂಲಕ ಪ್ರಸಿದ್ದ ವೈದ್ಯರಾಗಿ ಗುರುತಿಸಿಕೊಂಡಿದ್ದರು. ಮೂಲತಃ ತಮಿಳುನಾಡಿನವರಾದ ಡಾ. ಸೆಲ್ವರಾಜ್ ಅವರು ತಮ್ಮ ವೃತ್ತಿ ಜೀವನವನ್ನು ಇಲ್ಲಿಯೇ ಆರಂಭಿಸುವ ಮೂಲಕ ಬಡ ವರ್ಗದವರಿಗೂ ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದರು. ಅಲ್ಲದೆ ಬಹಳಷ್ಟು ಮಂದಿ ದುರ್ಬಲ ವರ್ಗದವರಿಗೆ ಉಚಿತವಾಗಿ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದರು.
    ನ್ಯೂಟೌನ್ ಕಿರಿಯ ತಾಂತ್ರಿಕ ಶಾಲೆ(ಜೆಟಿಎಸ್) ಸಮೀಪ ಶುಗರ್ ಟೌನ್ ಲಯನ್ಸ್ ಕ್ಲಬ್ ಆರಂಭಕ್ಕೆ ಕಾರಣಕರ್ತರಾಗಿದ್ದರು. ಹಲವಾರು ಉಚಿತ ಶಿಬಿರಗಳಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಸೋಮವಾರ ಹುತ್ತಾ ಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.
    ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ, ಸ್ವಯಂ ಸೇವಾಸಂಸ್ಥೆಗಳ ಪ್ರಮುಖರು, ವೈದ್ಯರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment