Thursday, July 21, 2022

೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ  ಕೀರ್ತಿ ತಂದಿದ್ದಾರೆ.
    ಭದ್ರಾವತಿ, ಜು. ೨೧: ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ)ದ ವಿದ್ಯಾರ್ಥಿಗಳು ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ-ನೇಪಾಳ್ ಚಾಂಪಿಯನ್‌ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ.
    ಪಿಸಿಎ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ನೇಪಾಳ್ ಮತ್ತು ನ್ಯಾಷನಲ್ ಸ್ಪೋರ್ಟ್ಸ್ & ಎಜ್ಯುಕೇಷನ್ ಡೆವಲಪ್‌ಮೆಂಟ್ ಫೆಡರೇಷನ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೧೪ ವರ್ಷದೊಳಗಿನ ವಿಭಾಗದಲ್ಲಿ ಕೇಂದ್ರೀಯದ ವಿದ್ಯಾರ್ಥಿಗಳಾದ ಬಿ.ಎಂ ವೇದಾಂತ್ ಡಿಸ್ಕಸ್ ಥ್ರೋ, ಕೆ. ಸಮಥ ಗುಂಡು ಎಸೆತ, ಶರಥ್ವಿ ಬಾಗ್ಸಲೆ ೨೦೦ ಮೀ. ಓಟ, ಕೆ,ಎಸ್ ಮೊಹಮದ್ ರಯಾನ್ ೪೦೦ ಮೀ. ಓಟ, ಕೆ. ಸುಪ್ರಿತ ಯೋಗಾಸನ ಮತ್ತು ಡಿ. ಚಿನ್ಮಯ ಪ್ರಸಾದ್ ಚೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗು ಕೆ.ಸಿ ಸಮರ್ಥ್ ಪುರಾಣಿಕ್ ಚೆಸ್ ಮತ್ತು ಪಿ. ಜಸ್ವಂತ್ ರೆಡ್ಡಿ ೨೦೦ ಮೀ. ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
    ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ವಿಐಎಸ್‌ಎಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಕುಮಾರ್ ಎಎಲ್‌ಡಬ್ಲ್ಯೂ ಹಾಗು ಕೇಂದ್ರೀಯ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ತರಬೇತಿದಾರರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
    ವಿಜೇತ ತಂಡ ಶುಕ್ರವಾರ ನಗರದಕ್ಕೆ ಆಗಮಿಸಲಿದ್ದು, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತಕ್ಕೆ ಶಾಸಕ ಸಂಗಮೇಶ್ವರ್ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು, ಪೋಷಕರು, ಕ್ರೀಡಾಭಿಮಾನಿಗಳು ಮುಂದಾಗಿದ್ದಾರೆ.


No comments:

Post a Comment