ಭದ್ರಾವತಿ : ನಗರದ ವಿಶ್ವೇಶ್ವರಾಯ ಐರನ್& ಸ್ಟೀಲ್ ಪ್ಲಾಂಟ್ ಎಂಪ್ಲಾಯಿಸ್ ಅಸೋಸಿಯೇಷನ್ (ಎಐಟಿಯುಸಿ) ಅಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್, ಸಹಕಾರ್ಯದರ್ಶಿಯಾಗಿ ಕೆ. ಐಸಾಕ್ ಲಿಂಕನ್ ಮತ್ತು ಖಜಾಂಚಿಯಾಗಿ ಎಂ. ಶಿವನಾಗು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್, ಜಿ. ಮಂಜುನಾಥ್, ಆರ್. ರಾಘವೇಂದ್ರ, ಜೆ. ಪ್ರಕಾಶ್, ಕಿರಣ್ ಕುಮಾರ್, ದೇವೇಂದ್ರ, ಎಲ್. ಆರ್ ನವೀನ್ ಮತ್ತು ಎಂ. ವೆಂಕಟೇಶ್ ಆಯ್ಕೆಯಾಗಿದ್ದಾರೆ. ನ್ಯಾಯವಾದಿ ಎಸ್. ರವಿಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ನೂತನ ಪದಾಧಿಕಾರಿಗಳನ್ನು ಕಾರ್ಮಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಅಭಿನಂದಿಸಿದ್ದಾರೆ.
No comments:
Post a Comment