Tuesday, July 5, 2022

ತಾಲೂಕು ಕುರುಬರ ಸಂಘದ ಚುನಾವಣೆ : ಮತದಾರರ ಪಟ್ಟಿಯಲ್ಲಿ ಲೋಪ

ಪಟ್ಟಿ ಪರಿಷ್ಕರಣೆಗೆ ಮನವಿ, ತಾತ್ಕಾಲಿಕವಾಗಿ ಚುನಾವಣೆ ಮುಂದೂಡಲು ಆಗ್ರಹ

 ಭದ್ರಾವತಿ ತಾಲೂಕು ಕುರುಬರ ಸಂಘದಲ್ಲಿ ಪ್ರತಿ ಚುನಾವಣೆ ಸಂದರ್ಭದಲ್ಲೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದ್ದು, ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡದೇ ಏಕಾಏಕಿ ಚುನಾವಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಂಗಳವಾರ ಕುರುಬ ಸಮಾಜದ ಪ್ರಮುಖರು ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಆಗ್ರಹಿಸಿದ್ದಾರೆ.
 ಭದ್ರಾವತಿ, ಜು. ೫ : ತಾಲೂಕು ಕುರುಬರ ಸಂಘದಲ್ಲಿ ಪ್ರತಿ ಚುನಾವಣೆ ಸಂದರ್ಭದಲ್ಲೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದ್ದು, ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡದೇ ಏಕಾಏಕಿ ಚುನಾವಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಂಗಳವಾರ ಕುರುಬ ಸಮಾಜದ ಪ್ರಮುಖರು ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಆಗ್ರಹಿಸಿದ್ದಾರೆ.
      ಹಳೇನಗರದ ಬಸವೇಶ್ವರ ವೃತ್ತದ ಸಮೀಪದ ಕನಕ ವಿದ್ಯಾಸಂಸ್ಥೆಯಲ್ಲಿರುವ ಸಂಘದ ಕಛೇರಿಯಲ್ಲಿ ಸಮಾಜದ ಪ್ರಮುಖರು ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮತದಾರರ ಪಟ್ಟಿಯಲ್ಲಿ ಉಂಟಾಗಿರುವ ಲೋಪದೋಷಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮತದಾರರ ಪಟ್ಟಿಯಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಸದಸ್ಯರ ಹೆಸರು ಎರಡೆರಡು ಬಾರಿ ಮುದ್ರಣಗೊಂಡಿದ್ದು, ಅಲ್ಲದೇ ಹೊಸ ಮತದಾರರನ್ನು ಪರಿಶೀಲನೆ ಮಾಡದೆ ಚುನಾವಣೆಯನ್ನು ನಡೆಸಲಾಗುತ್ತಿದೆ. ತಕ್ಷಣ ಚುನಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ತಾತ್ಕಾಲಿಕವಾಗಿ ಮುಂದೂಡುವಂತೆ ಆಗ್ರಹಿಸಿದರು.
      ಸಂಘದ ಚುನಾವಣೆ ಸಂದರ್ಭದಲ್ಲಿ ಹಲವಾರು ಬಾರಿ ನ್ಯಾಯಾಲಯದ ಮೆಟ್ಟಿಲೇರಲಾಗಿದೆ. ಈ ಬಾರಿ ಸಹ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ತಕ್ಷಣ ಚುನಾವಣೆ ನಡೆಸುವಂತೆ ಆದೇಶಿಸಲಾಗಿದೆ. ಅಲ್ಲದೆ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕಗೊಳಿಸಲಾಗಿದೆ. ಹೊಸದಾಗಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವಂತೆ ಸೂಚಿಸಲಾಗಿದೆ. ಆದರೆ ಇದನ್ನು ಪಾಲಿಸದೆ ಏಕಾಏಕಿ ಚುನಾವಣೆ ಘೋಷಿಸಲಾಗಿದೆ. ತಕ್ಷಣ ಚುನಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪಾರದರ್ಶಕವಾಗಿ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.
      ಒಂದು ವೇಳೆ ಚುನಾವಣೆ ನಡೆಸಲು ಮುಂದಾದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ತಾತ್ಕಾಲಿಕವಾಗಿ ಚುನಾವಣೆ ಮುಂದೂಡಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಅಥವಾ ಸಹಕಾರಿ ಇಲಾಖೆ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಬೇಕು. ಅಲ್ಲಿಯವರೆಗೂ ಅನಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಪಟ್ಟು ಹಿಡಿದ್ದಾರೆ. ನವೀನ್‌ಕುಮಾರ್ ಚುನಾವಣಾಧಿಕಾರಿಯಾಗಿದ್ದು, ಶಾಂತರಾಜ್ ಆಡಳಿತಾಧಿಕಾರಿಯಾಗಿದ್ದಾರೆ.
      ಸಮಾಜದ ಪ್ರಮುಖರಾದ ಬಿ.ಎಸ್ ನಾರಾಯಣಪ್ಪ, ಡಿ.ಎನ್ ತ್ಯಾಗರಾಜ್, ಅಭಿಲಾಷ್, ಹೇಮಾವತಿ ಶಿವಾನಂದ್, ಶಾರದಮ್ಮ, ಕೃಷ್ಣಮೂರ್ತಿ, ಗುರುಶಾಂತಪ್ಪ, ಶ್ರೀನಿವಾಸ್, ರಾಜು ಹೋಬಳಿದಾರ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment