ಪ್ರವಾಹದಿಂದ ಹಾನಿಗೊಳಗಾಗಿರುವ ಭದ್ರಾವತಿ ಹೊಸಸೇತುವೆಯನ್ನು ಬುಧವಾರ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಭದ್ರಾವತಿ, ಜು. ೨೦: ಕಳೆದ ಕೆಲವು ದಿನಗಳ ಹಿಂದೆ ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿಸಿದ ಹಿನ್ನಲೆಯಲ್ಲಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಮುಳುಗಡೆಗೊಂಡಿದ್ದ ಹೊಸಸೇತುವೆಯ ಎರಡು ಬದಿಯ ತಡೆಗೋಡೆಗಳು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಹಿನ್ನಲೆಯಲ್ಲಿ ಸೇತುವೆ ಅಪಾಯದ ಸ್ಥಿತಿಯಲ್ಲಿದ್ದು, ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೂ ಸೇತುವೆ ಮೇಲೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಬುಧವಾರ ಸೇತುವೆ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಸೇತುವೆ ಅತ್ಯಂತ ಅಪಾಯದ ಸ್ಥಿತಿಯಲ್ಲಿರುವುದರಿಂದ ಈ ಸೇತುವೆ ಮೇಲೆ ವಾಹನ ಹಾಗು ಪಾದಚಾರಿಗಳ ಸಂಚಾರ ಸಂಪೂರ್ಣವಾಗಿ ನಿಷೇಧಿಸಲು ತೀರ್ಮಾನಿಸಿತು. ಅಲ್ಲದೆ ತುರ್ತಾಗಿ ದುರಸ್ತಿ ಕಾರ್ಯ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಿತು.
ಉಪ ವಿಭಾಗಾಧಿಕಾರಿ ದೊಡ್ಡ ಗೌಡರ್, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮಾ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸಂಪತ್ಕುಮಾರ್, ಪೌರಾಯುಕ್ತ ಮನು ಕುಮಾರ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment