ಭದ್ರಾವತಿ ಹೊಸಮನೆ ಕುವೆಂಪು ನಗರ ನಿವಾಸಿ, ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್ ಅವರಿಗೆ .ಯೋಗ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಮದರ್ ಇಂಡಿಯಾ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
-- ಭದ್ರಾವತಿ, ಜು. ೧೮: ನಗರದ ಹೊಸಮನೆ ಕುವೆಂಪು ನಗರ ನಿವಾಸಿ, ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್ ಅವರಿಗೆ .ಯೋಗ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಮದರ್ ಇಂಡಿಯಾ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನವತಿಯಿಂದ ಆಯೋಜಿಸಲಾಗಿದ್ದ ವಚನ ವೈಭವ ವಿಚಾರಸಂಕಿರಣ, ನಾಟ್ಯ ವೈಭವ ಮತ್ತು ಗಾನ ವೈಭವ ಕಾರ್ಯಕ್ರಮದಲ್ಲಿ ಡಾ. ನಿಂಗೇಶ್ ಅವರಿಗೆ ವೇದಿಕ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಚಿಬನೂರಿನ ಸುಕ್ಷೇತ್ರ ಮಠದ ಶ್ರೀ ರಾಮಲಿಂಗಯ್ಯ ಸ್ವಾಮೀಜಿ, ನಿವೃತ್ತ ನ್ಯಾಯದೀಶ ಅರಳಿ ನಾಗರಾಜು, ಪ್ರತಿಷ್ಠಾನದ ಅಧ್ಯಕ್ಷ ಡಾ. ಗುಣವಂತ ಮಂಜು. ನಿರೂಪಕಿ ದಿವ್ಯಾ ಆಲೂರು, ಗಾಯಕ ಶಶಿಧರ್ ಕೋಟೆ, ಹಾಸ್ಯನಟ ಚಿಕ್ಕಣ್ಣ, ಚಲಪತಿ ಮತ್ತು ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment