Thursday, July 7, 2022

ವರ್ಗಾವಣೆಗೊಂಡ ಉಪವಿಭಾಗಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಗೆ ಬೀಳ್ಕೊಡುಗೆ


ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಟಿ.ವಿ ಪ್ರಕಾಶ್ ಹಾಗು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರಭಾರ ಕರ್ತವ್ಯ ನಿರ್ವಹಿಸಿ ಮೂಲ ಸ್ಥಾನಕ್ಕೆ ಹಿಂದಿರುಗಿರುವ ಗೋಪಿನಾಥ್ ಅವರಿಗೆ ಭದ್ರಾವತಿ ತಾಲೂಕು ಆಡಳಿತದ ಪರವಾಗಿ ಬೀಳ್ಕೊಡುಗೆ ನೀಡಲಾಯಿತು.
    ಭದ್ರಾವತಿ, ಜು. ೭: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಟಿ.ವಿ ಪ್ರಕಾಶ್ ಹಾಗು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರಭಾರ ಕರ್ತವ್ಯ ನಿರ್ವಹಿಸಿ ಮೂಲ ಸ್ಥಾನಕ್ಕೆ ಹಿಂದಿರುಗಿರುವ ಗೋಪಿನಾಥ್ ಅವರಿಗೆ ತಾಲೂಕು ಆಡಳಿತದ ಪರವಾಗಿ ಬೀಳ್ಕೊಡುಗೆ ನೀಡಲಾಯಿತು.
      ಸುಮಾರು ೪ ವರ್ಷಗಳ ಕಾಲ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಟಿ.ವಿ ಪ್ರಕಾಶ್‌ರವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಲಾಯಿತು.
      ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೂದ್‌ಪೀರ್ ಅವರು ಮುಂಬಡ್ತಿಹೊಂದಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ತೆರವಾಗಿದ್ದ ಹುದ್ದೆಯಲ್ಲಿ ಗೋಪಿನಾಥ್ ಅವರು ಸುಮಾರು ೧ ವರ್ಷ ಪ್ರಭಾರ ಅಧಿಕಾರ ನಿರ್ವಹಿಸಿ ಹಿಂದಿರುಗಿದ್ದಾರೆ. ತಾಲೂಕು ಆಡಳಿತ ವತಿಯಿಂದ ಇಬ್ಬರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
      ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೊಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಹಾಗು ಆಡಳಿತ ಕಛೇರಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment