Friday, July 22, 2022

ಕೆರೆ ಕೋಡಿ ದುರಸ್ತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಡಿ.ಎಸ್ ಅರುಣ್ ಗೆ ಮನವಿ

ಭದ್ರಾವತಿ: ನಗರಸಭೆ ವ್ಯಾಪ್ತಿಯ ತಮ್ಮಣ್ಣ ಕಾಲೋನಿ ಸಮೀಪದಲ್ಲಿರುವ ಸರ್ಕಾರಿ ಹಿರೇಕೆರೆ ಕೋಡಿ ಬಿದ್ದು ರಸ್ತೆ ಹಾಳಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಬೇಕೆಂದು ನಗರದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅವರಿಗೆ ಮನವಿ ಸಲ್ಲಿಸಲಾಗಿದೆ.
      ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಮತ್ತು ಎಟಿಎಂ ಕೌಂಟರ್ ಪ್ರಾರಂಭ ಮಾಡಲು ಹಾಗೂ ಅಡುಗೆ ಅನಿಲ ವಿತರಣಾ ಕೇಂದ್ರ ಪ್ರಾರಂಭಿಸಲು ಮತ್ತು ಪ್ರಸ್ತುತ ಗ್ರಾಮದಲ್ಲಿರುವ ಪದವಿ ಪೂರ್ವ  ಕಾಲೇಜನ್ನು ಮೇಲ್ದರ್ಜೆಗೇರಿಸಿ ಪದವಿ ಕಾಲೇಜು ಆರಂಭಿಸಲು ಸಂಬಂಧ ಪಟ್ಟ ಇಲಾಖೆಗಳಿಗೆ ಒತ್ತಾಯಿಸುವುದು ಮತ್ತು ಸಿಂಗನಮನೆ, ಹಿರಿಯೂರು, ದೊಣಬಘಟ್ಟ, ಬಿಳಿಕಿ ಹಾಗು ತಡಸ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶುದ್ಧವಾದ ಮತ್ತು ಸಮರ್ಪಕವಾದ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
          ಮನವಿಯನ್ನು ಟ್ರಸ್ಟ್ ಚೇರ್ಮನ್  ಆರ್. ವೇಣುಗೋಪಾಲ್ ಡಿ.ಎಸ್ ಅರುಣ್ ಅವರಿಗೆ ಸಲ್ಲಿಸಿದ್ದು, ಈಗಾಗಲೇ ಪ್ರತ್ಯೇಕವಾಗಿ ಸಲ್ಲಿಸಿರುವ 6 ಮನವಿಗಳಿಗೆ ಪೂರಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

No comments:

Post a Comment