ಶನಿವಾರ, ಜುಲೈ 23, 2022

ವಿಜೃಂಭಣೆಯಿಂದ ಜರುಗಿದ ಆಡಿ ಕೃತಿಕ ಕಾವಡಿ ಜಾತ್ರಾ ಮಹೋತ್ಸವ

ಗಮನ ಸೆಳೆದ ಕಾವಡಿ ಹರಕೆ ಹೊತ್ತ ಭಕ್ತರು

ಭದ್ರಾವತಿ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಡಿ ಕೃತಿಕ ಕಾವಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಕಾವಡಿ ಹರಕೆ ಹೊತ್ತ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸಿ ಹರಕೆ ಸಮರ್ಪಿಸಿದರು. 
    ಭದ್ರಾವತಿ, ಜು. ೨೫: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಡಿ ಕೃತಿಕ ಕಾವಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. 
ಜು.೧೭ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರಾ ಮಹೋತ್ಸವ ಶನಿವಾರ ಅಂತ್ಯಗೊಂಡಿತು. ಬೆಳಿಗ್ಗೆ ವಿಶ್ವರೂಪ ದರ್ಶನ, ಅಭಿಷೇಕ, ಉತ್ಸವ ಪೂಜೆ ಹಾಗು ಮಧ್ಯಾಹ್ನ ಕಾವಡಿ ಹರಕೆ ಸಮರ್ಪಣೆ, ಮಹಾಪೂಜೆ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. 
ಮೂಲ ವಿಗ್ರಹ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ಸೇರಿದಂತೆ ದೇವಸ್ಥಾನದಲ್ಲಿರುವ ಎಲ್ಲಾ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಾವಡಿ ಹರಕೆ ಹೊತ್ತ ಭಕ್ತರು ಕಾಲ್ನಡಿಗೆಯಲ್ಲಿ ಹರೋ ಹರ ಘೋಷಣೆಗಳೊಂದಿಗೆ ಆಗಮಿಸಿ ಹರಕೆ ತೀರಿಸುವ ಮೂಲಕ ಭಕ್ತಿ ಮೆರದರು. 
ರಾಜ್ಯದ ವಿವಿಧೆಡೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ದೇವಸ್ಥಾನದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ಸಮಿತಿಯ ಪ್ರಮುಖರು,  ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದ ಸೇವಾಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಶಿವಮೊಗ್ಗ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ : 
ನಗರದ ನ್ಯೂಟೌನ್ ಆಂಜನೇಯ ಅಗ್ರಹಾರದಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಿಂದ ಶಿವಮೊಗ್ಗ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹರಕೆ ಹೊತ್ತ ಭಕ್ತರು ಶುಕ್ರವಾರ ಸಂಜೆ ಕಾಲ್ನಡಿಗೆ ಸಾಗಿದರು. ಶನಿವಾರ ಬೆಳಿಗ್ಗೆ ಹರಕೆ ಸಮರ್ಪಿಸಿದರು. ಪ್ರತಿವರ್ಷ ಕಾಲ್ನಡಿಗೆ ಮೂಲಕ ದೇವಸ್ಥಾನಕ್ಕೆ ಸಾಗುವುದು ವಾಡಿಕೆಯಾಗಿದೆ. 


ಭದ್ರಾವತಿ ನ್ಯೂಟೌನ್ ಆಂಜನೇಯ ಅಗ್ರಹಾರದಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಿಂದ ಶಿವಮೊಗ್ಗ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹರಕೆ ಹೊತ್ತ ಭಕ್ತರು ಶುಕ್ರವಾರ ಸಂಜೆ ಕಾಲ್ನಡಿಗೆ ಸಾಗಿದರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ