ಭದ್ರಾವತಿ, ಜು. ೩೧: ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಪಾಲಿಶ್ ಮಾಡುವ ನೆಪದಲ್ಲಿ ಚಿನ್ನದ ಮಾಂಗಲ್ಯ ಸರ ಪಡೆದು ಪರಾರಿಯಾಗಿರುವ ಘಟನೆ ತಾಲೂಕಿನ ತಾರೀಕಟ್ಟೆ ಗ್ರಾಮದಲ್ಲಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಗ್ರಾಮದ ಕೆಂಪಮ್ಮ ಎಂಬುವರ ಮನೆ ಬಳಿ ಬಂದ ಇಬ್ಬರು ಅಪರಿಚತ ವ್ಯಕ್ತಿಗಳು ಮೊದಲು ಬೆಳ್ಳಿ ಸಾಮಾನು ಮತ್ತು ಹಿತ್ತಾಳೆ ವಸ್ತುಗಳನ್ನ ತೆಗೆದುಕೊಂಡು ಬನ್ನಿ ಪಾಲಿಶ್ ಹಾಕಿಕೊಡುತ್ತೇವೆ ಎಂದು ಕೇಳಿದ್ದಾರೆ. ಕೆಂಪಮ್ಮ ಬೆಳ್ಳಿ ಆಭರಣ ಕಾಲ್ಚೈನ್ ಮತ್ತು ದೇವರ ಮನೆಯ ಹಿತ್ತಾಳೆ ಸಾಮಾಗ್ರಿಗಳನ್ನ ತಂದು ಕೊಟ್ಟಿದ್ದಾರೆ. ಇವುಗಳನ್ನು ಪಾಲಿಶ್ ಮಾಡಿದ ನಂತರ ಕೆಂಪಮ್ಮ ಅವರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಪಡೆದು ಕೊಂಡಿದ್ದಾರೆ. ನಂತರ ಕೆಂಪಮ್ಮಳಿಗೆ ಒಂದು ಲೋಟ ನೀರು ತೆಗೆದುಕೊಂಡು ಬರಲು ಹೇಳಿದ್ದು, ನೀರು ತರುವಷ್ಟರಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ
ಕೆಂಪಮ್ಮ ೪೭ ಗ್ರಾಂ ತೂಕ ಮಾಂಗಲ್ಯ ಸರ ಕಳೆದುಕೊಂಡಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
No comments:
Post a Comment