ಮುಕ್ತಾಯದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ : ಬಟ್ಟೆ ಅಂಗಡಿ ಗಾಜು ಪುಡಿ ಪುಡಿ
ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಭಾನುವಾರ ಸಂಜೆ ಭದ್ರಾವತಿ ನಗರದ ರಂಗಪ್ಪ ವೃತ್ತದಲ್ಲಿ ಬಜರಂಗದಳ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
ಭದ್ರಾವತಿ, ಜು. ೩ : ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ನಯ್ಯಾ ಲಾಲ್ ಟೈಲರ್ ಕಗ್ಗೊಲೆ ಖಂಡಿಸಿ ಭಾನುವಾರ ಸಂಜೆ ನಗರದ ರಂಗಪ್ಪ ವೃತ್ತದಲ್ಲಿ ಬಜರಂಗದಳ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
ರಾಜಸ್ತಾನದ ಉದಯಪುರದಲ್ಲಿ ನೂಪುರ್ ಶರ್ಮಾ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸಿ ಪೋಸ್ಟ್ ಮಾಡಿದ ಕಾರಣಕ್ಕೆ ಕನ್ನಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿರುವುದು ಖಂಡನೀಯ, ದೇಶದಲ್ಲಿ ಹಿಂದುಗಳು ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ಹತ್ಯೆಗೆ ಕಾರಣರಾದವರನ್ನು ತಕ್ಷಣ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.
ರಸ್ತೆ ತಡೆ ನಡೆಸಿ ಪ್ರತಿಭಟಿಸುವ ಮೂಲಕ ಹತ್ಯೆಗೆ ಕಾರಣರಾದವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರಮುಖರಾದ ದುರ್ಗಾವಾಹಿನಿ ಸಂಘಟನೆಯ ಶೈಲ, ಬಜರಂಗದಳ ಜಿಲ್ಲಾ ಸಹ ಸಂಚಾಲಕ ರಾಘವನ್ ವಡೀವೇಲು ಸೇರಿದಂತೆ ಇನ್ನಿತರರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಪ್ರಮುಖರಾದ ಕೃಷ್ಣ, ಚಂದ್ರು, ಶ್ರೀಕಾಂತ, ಕಿರಣ, ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಅವಾಚ್ಯ ಶಬ್ದಗಳಿಂದ ನಿಂದನೆ : ಎರಡು ಗುಂಪುಗಳ ನಡುವೆ ಗಲಾಟೆ:
ಪ್ರತಿಭಟನೆ ಮುಕ್ತಾಯಗೊಳಿಸಿ ತೆರಳುವಾಗ ರಂಗಪ್ಪ ವೃತ್ತದಲ್ಲಿ ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ಪ್ರತಿಭಟನಾಕಾರರನ್ನು ನಿಂದಿಸಿದ್ದು, ಇದರಿಂದಾಗಿ ಮಾತಿನ ಚಕಮಕಿ ನಡೆದು ಗಲಾಟೆ ನಡೆದಿದೆ ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ರಾಘವನ್ ವಡೀವೇಲು ಪತ್ರಿಕೆಗೆ ಸ್ಪಷ್ಟಪಡಿಸಿದ್ದಾರೆ. ಇದುವರೆಗೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಒಂದು ವೇಳೆ ದೂರು ದಾಖಲು ಮಾಡಿದ್ದಲ್ಲಿ ನಾವು ಸಹ ಪ್ರತಿ ದೂರು ನೀಡುವುದಾಗಿ ತಿಳಿಸಿದ್ದಾರೆ.
ಗಲಾಟೆ ಸಂದರ್ಭದಲ್ಲಿ ಸ್ವಾಗ್ ಮೆನ್ಸ್ ಫ್ಯಾಷನ್ ಬಟ್ಟೆ ಅಂಗಡಿಯ ಗಾಜು ಪುಡಿ ಪುಡಿಯಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಎರಡು ಕಡೆಯವರನ್ನು ಸಮಾಧಾನಗೊಳಿಸಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ.
ಪ್ರತಿಭಟನೆ ಮುಕ್ತಾಯಗೊಳಿಸಿ ತೆರಳುವಾಗ ರಂಗಪ್ಪ ವೃತ್ತದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಬಟ್ಟೆ ಅಂಗಡಿಯೊಂದರ ಗಾಜು ಪುಡಿ ಪುಡಿಯಾಗಿರುವುದು.
No comments:
Post a Comment