ಶಂಕರ್
ಭದ್ರಾವತಿ, ಜು. ೩೧ : ಹಳೇಬುಳ್ಳಾಪುರ ಬೈಪಾಸ್ ರಸ್ತೆ ಪೆಟ್ರೋಲ್ ಬಂಕ್ ಬಳಿ ನಿವಾಸಿ, ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಶಂಕರ್(೫೦) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಪತ್ನಿಯನ್ನು ಹೊಂದಿದ್ದರು. ವಿಐಎಸ್ಎಲ್ ಕಾರ್ಖಾನೆಯ ಸಂಚಾರಿ ವಿಭಾಗದಲ್ಲಿ ಇಂಜಿನ್ ಚಾಲಕರಾಗಿ ಸುಮಾರು ೧೫ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಅಂತ್ಯಕ್ರಿಯೆ ತಿಮ್ಲಾಪುರ, ಬಾಳೆಮಾರನಹಳ್ಳಿ ರಸ್ತೆಯಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ವಿಶ್ವೇಶ್ವರಾಯ ಐರನ್ ಅಂಡ್ ಸ್ಟೀಲ್ ಪ್ಲಾಂಟ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಪ್ರಮುಖರಾದ ಎಂ. ನಾರಾಯಣ ಹಾಗು ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸುರೇಶ್, ಗುತ್ತಿಗೆ ಕಾರ್ಮಿಕರು ಶಂಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
No comments:
Post a Comment