ಭದ್ರಾ ಜಲಾಶಯದಿಂದ ಗುರುವಾರ ಮಧ್ಯಾಹ್ನ ನದಿಗೆ ನೀರು ಬಿಟ್ಟ ಹಿನ್ನಲೆಯಲ್ಲಿ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಭದ್ರಾವತಿ, ಜು. ೧೪: ಭದ್ರಾ ಜಲಾಶಯದಿಂದ ಗುರುವಾರ ಮಧ್ಯಾಹ್ನ ನದಿಗೆ ನೀರು ಬಿಟ್ಟ ಹಿನ್ನಲೆಯಲ್ಲಿ ನಗರದ ಹೃದಯ ಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಜಲಾಶಯ ಬಹುಬೇಗನೆ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ನೀರು ನಗರ ಪ್ರವೇಶಿಸುತ್ತಿದ್ದಂತೆ ಹಂತ ಹಂತವಾಗಿ ಏರಿಕೆ ಕಂಡು ಬರುತ್ತಿದೆ. ರಾತ್ರಿ ಸುಮಾರು ೮.೩೦ರ ವೇಳೆಗೆ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು, ತಕ್ಷಣ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಿ ಎರಡು ಕಡೆ ಬ್ಯಾರಿಗೇಡ್ಗಳನ್ನು ಅಳವಡಿಸಲಾಗಿದೆ. ಎರಡು ಬದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ.
ಹೊಸಸೇತುವೆ ಮುಳುಗಡೆಗೊಳ್ಳುವ ಒಂದು ತಾಸು ಮೊದಲೇ ಹಳೇಸೇತುವೆ ಸಮೀಪದಲ್ಲಿರುವ ಸಂಗಮೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಗೊಂಡಿದೆ.
ಎಲ್ಲಾ ವಾಹನಗಳು ಹಳೇಸೇತುವೆ ಸಂಚರಿಸುತ್ತಿದ್ದು, ಇದರಿಂದಾಗಿ ವಾಹನ ದಟ್ಟಣೆ ಅಧಿಕವಾಗಿದೆ. ನೀರನ ಮಟ್ಟ ಇನ್ನೂ ಏರಿಕೆಯಾಗುವ ಸಾಧ್ಯತೆ ಕಂಡು ಬರುತ್ತಿದ್ದು, ಇದರಿಂದಾಗಿ ತಗ್ಗು ಪ್ರದೇಶದ ನಿವಾಸಿಗಳು ಆತಂಕಕ್ಕೆ ಒಳಗಾಗುವಂತಾಗಿದೆ.
No comments:
Post a Comment