Saturday, July 30, 2022

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕುವೆಂಪು ಕೇಂದ್ರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ

ಕುವೆಂಪು ವಿಶ್ವ ವಿದ್ಯಾಲಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಹಲವು ತಿಂಗಳುಗಳಿಂದ ಬಾಕಿ ಇರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರದಿಂದ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ವಿಶ್ವ ವಿದ್ಯಾಲಯದ ಕೇಂದ್ರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಯಿತು.
    ಭದ್ರಾವತಿ, ಜು. ೩೦: ಕುವೆಂಪು ವಿಶ್ವ ವಿದ್ಯಾಲಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಹಲವು ತಿಂಗಳುಗಳಿಂದ ಬಾಕಿ ಇರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರದಿಂದ ತಾಲೂಕಿನ ಶಂಕರಘಟ್ಟದಲ್ಲಿರುವ ವಿಶ್ವ ವಿದ್ಯಾಲಯದ ಕೇಂದ್ರ ಕಛೇರಿ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಯಿತು.
    ಸರ್ವೋಚ್ಛ ನ್ಯಾಯಾಲಯದ ತೀರ್ಪು ಮತ್ತು ರಾಜ್ಯ ಸರ್ಕಾರದ ಆದೇಶದ ಮೇಲೆ ಜು.೯, ೨೦೨೦ರಂದು ಸಿಂಡಿಕೇಟ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಇದುವರೆಗೂ ಸಂಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ಬಡ್ತಿ ಹೊಂದಿರುವ ನೌಕರರಿಗೆ ವೇತನ ನಿಗದಿಕರಣ, ಉಪ ಕುಲಸಚಿವ ಹುದ್ದೆಗಳಿಗೆ ಮತ್ತು ಇತರೆ ಖಾಲಿ ಹುದ್ದೆಗಳಿಗೆ ಬಡ್ತಿ ಕೈಗೊಂಡಿರುವುದಿಲ್ಲ. ಅಲ್ಲದೆ ಉಳಿದ ವಿಲೀಕರಣ ನೌವಕರರಿಗೆ ಸೌಲಭ್ಯ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಲಾಯಿತು.
    ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಲಾಯಿತು.
    ಸಂಘದ ಅಧ್ಯಕ್ಷ ಶ್ರೀನಿವಾಸ್ ಮುಷ್ಕರದ ನೇತೃತ್ವ ವಹಿಸಿದ್ದರು. ಸಂಘದ ಪದಾಧಿಕಾರಿಗಳು, ಅಧ್ಯಾಪಕೇತರ ನೌಕರರು ಪಾಲ್ಗೊಂಡಿದ್ದರು.

No comments:

Post a Comment