ಭದ್ರಾವತಿ: ಮಹಿಳೆಯೊಬ್ಬರ ಚಿನ್ನದ ಸರ ಹಾಗೂ ಬೆಳ್ಳಿ ಕರಡಿಕೆ ಕಳುವು ಮಾಡಿದ್ದ ವ್ಯಕ್ತಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆ ಮಾರನಹಳ್ಳಿಯಲ್ಲಿ ತಮ್ಮ ಮನೆಯ ಹಿತ್ತಲಿನಲ್ಲಿ ಪಾತ್ರೆ ತೊಳೆಯುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ದುಷ್ಕರ್ಮಿಯೊಬ್ಬ ಕದ್ದೊಯ್ದ ಘಟನೆ ನಡೆದಿತ್ತು.
ಮಹಿಳೆಯೊಬ್ಬರು ತಮ್ಮ ಮನೆಯ ಹಿತ್ತಲಿನಲ್ಲಿ ಪಾತ್ರೆ ತೊಳೆಯುತ್ತಿದ್ದ ವೇಳೆ ತಿಮ್ಲಾಪುರದ ಜಯ ಸುನಿಲ್ ಎಂಬ ವ್ಯಕ್ತಿಯು ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಬೆಳ್ಳಿಯ ಕರಡಿಗೆಯನ್ನು ಕಿತ್ತುಕೊಂಡು ಪರಾರಿಯಾಗಿದ್ದನು.
ದೂರಿನ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದ ಅಂದಿನ ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಕೆ.ಎಂ ಯೋಗೇಶ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 4ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.
No comments:
Post a Comment