Wednesday, August 24, 2022

ಕಾರ್ಯದರ್ಶಿಯಾಗಿ ನಕುಲ್ ರೇವಣ್ಕರ್

ನಕುಲ್ ರೇವಣ್ಕರ್
    ಭದ್ರಾವತಿ, ಆ. ೨೪:  ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ನಗರಸಭೆ ವಾರ್ಡ್ ನಂ.೩ರ ನಿವಾಸಿ ನಕುಲ್ ರೇವಣ್ಕರ್ ಅವರನ್ನು ನೇಮಕಗೊಳಿಸಲಾಗಿದೆ.
    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಸೂಚನೆಯಂತೆ ನಕುಲ್ ಅವರನ್ನು ಕಾರ್ಯದರ್ಶಿಯಾಗಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಎಂ.ವಿ ಹರಿಕೃಷ್ಣ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
    ನಕುಲ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಯುವ ಮೋರ್ಚಾದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇವನ್ನು ಪಕ್ಷದ ಸ್ಥಳೀಯ ಪ್ರಮುಖರು ಅಭಿನಂದಿಸಿದ್ದಾರೆ.  

No comments:

Post a Comment