ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಕನ್ನಡ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಎನ್. ತ್ರಿವೇಣಿ ಅವರಿಗೆ ಏಷಿಯಾ ವೇದಿಕ್ ಕಲ್ಚರ್ ರಿಸರ್ಜ್ ಯುನವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಭದ್ರಾವತಿ, ಆ. ೪: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಕನ್ನಡ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಎನ್. ತ್ರಿವೇಣಿ ಅವರಿಗೆ ಏಷಿಯಾ ವೇದಿಕ್ ಕಲ್ಚರ್ ರಿಸರ್ಜ್ ಯುನವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ತ್ರಿವೇಣಿ ಅವರ ಕಲೆ, ಸಾಮಾಜಿಕ ಹಾಗು ಶೈಕ್ಷಣಿಕ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ತಮಿಳುನಾಡಿನಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಸಾಧಕರ ಪದವಿ ವಿತರಣಾ ಸಮಾರಂಭದಲ್ಲಿ ತ್ರಿವೇಣಿ ಅವರು ಪದವಿ ಸ್ವೀಕರಿಸಿದ್ದಾರೆ.
ಇವರು ಹಲವಾರು ವರ್ಷಗಳಿಂದ ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಹಾಮಾರಿ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ಭರತನಾಟ್ಯ ನೃತ್ಯ ಕಲಾವಿದೆಯಾಗಿದ್ದು, ಹಲವಾರು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇವರ ಸಾಧನೆಗೆ ತಾಲೂಕು ಛಲವಾದಿಗಳ(ಪ.ಜಾ) ಸಮಾಜ, ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿ, ಕಬಡ್ಡಿ ಕೇಸರಿ ಪ್ರಶಸ್ತಿ ಪುರಸ್ಕೃತ ಎಚ್.ಆರ್ ರಂಗನಾಥ್ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment