ಆ.೧೮ರೊಳಗೆ ಅರ್ಜಿ ಸಲ್ಲಿಸಲು ಮನವಿ
ರಾಜ್ಯದಲ್ಲಿರುವ ಒಕ್ಕಲಿಗ ಸಮಾಜದ ಆರ್ಥಿಕ ಹಿಂದುಳಿದ ಕಡುಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ವಿವಿಧ ಯೋಜನೆಗಳ ಸಹಾಯಧನ ಬಿಡುಗಡೆಗೊಳಿಸಿದೆ. ಅರ್ಹ ಬಡವರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಭದ್ರಾವತಿ ಬಿಜೆಪಿ ಮುಖಂಡ ಎಸ್. ಕುಮಾರ್ ಮನವಿ ಮಾಡುವ ಮೂಲಕ ಅರ್ಹರಿಗೆ ಅರ್ಜಿಗಳನ್ನು ವಿತರಿಸಿದರು.
ಭದ್ರಾವತಿ, ಆ. ೧೦: ರಾಜ್ಯದಲ್ಲಿರುವ ಒಕ್ಕಲಿಗ ಸಮಾಜದ ಆರ್ಥಿಕ ಹಿಂದುಳಿದ ಕಡುಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ವಿವಿಧ ಯೋಜನೆಗಳ ಸಹಾಯಧನ ಬಿಡುಗಡೆಗೊಳಿಸಿದೆ. ಅರ್ಹ ಬಡವರು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಎಸ್. ಕುಮಾರ್ ಮನವಿ ಮಾಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಸಾಮೂಹಿಕ ಅಥವಾ ವೈಯಕ್ತಿಕ ಕೊಳವೆಬಾವಿ ನಿರ್ಮಿಸಿಕೊಳ್ಳಲು, ನಿರುದ್ಯೋಗಿಗಳಿಗೆ ಟೂರಿಸ್ಟ್ ಟ್ಯಾಕ್ಸಿ ಅಥವಾ ಸರಕು ಸಾಗಾಣಿಕ ವಾಹನ ಖರೀದಿಸಲು ಹಾಗು ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯ ಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಒಕ್ಕಲಿಗ ಸಮಾಜದವರು ಅರ್ಜಿ ಸಲ್ಲಿಸಲು ಬೆಂಗಳೂರು ಅಥವಾ ಶಿವಮೊಗ್ಗದಲ್ಲಿರುವ ದೇವರಾಜ ಅರಸು ನಿಗಮಕ್ಕೆ ಅಳೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗು ಸಾಮಾಜಿಕ ಮನೋಭಾವನೆಯೊಂದಿಗೆ ಅರ್ಜಿಗಳನ್ನು ನಾವೇ ವಿತರಿಸುವ ಮೂಲಕ ಅವುಗಳನ್ನು ಪುನಃ ಸಂಗ್ರಹಿಸಿ ನಿಗಮಕ್ಕೆ ತಲುಪಿಸಲಾಗುವುದು. ಈ ಹಿನ್ನಲೆಯಲ್ಲಿ ಅರ್ಹರು ಅರ್ಜಿಗಳನ್ನು ಪಡೆದು ಆ.೧೮ರೊಳಗೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೀಡುವುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್, ಆರ್. ಕೃಷ್ಣಮೂರ್ತಿ, ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment