ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದ ಎಂ.ಜೆ ಅಪ್ಪಾಜಿ
ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದ ಎಂ.ಜೆ ಅಪ್ಪಾಜಿ
ಭದ್ರಾವತಿ, ಆ. ೨೪: ರಾಜಕೀಯಕ್ಕೆ ಬರಬೇಕೆಂಬ ಬಯಕೆ ಹೊಂದಿಲ್ಲ. ಆದರೂ ಸಹ ಅನಿವಾರ್ಯ ಕಾರಣಗಳಿಂದ ಪಕ್ಷ ಮುನ್ನಡೆಸಿಕೊಂಡು ಹೋಗುತ್ತಿದ್ದೇನೆ ಎಂದು ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದ ಎಂ.ಜೆ ಅಪ್ಪಾಜಿ ಹೇಳಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಂ.ಜೆ ಅಪ್ಪಾಜಿ ಅವರು ೩ ಬಾರಿ ಕ್ಷೇತ್ರದ ಶಾಸಕರಾದರೂ ಸಹ ನಾನು ಎಂದಿಗೂ ರಾಜಕೀಯಕ್ಕೆ ಬರಬೇಕೆಂದು ಬಯಸಲಿಲ್ಲ. ಅಲ್ಲದೆ ಅವರ ಅಧಿಕಾರವನ್ನು ನಾನಾಗಲಿ, ನನ್ನ ಮಕ್ಕಳಾಗಲಿ ಎಂದಿಗೂ ದುರ್ಬಳಕೆ ಮಾಡಿಕೊಂಡಿಲ್ಲ. ಅಪ್ಪಾಜಿ ನಿಧನದ ನಂತರ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಪಕ್ಷ ಮುನ್ನಡೆಸಿಕೊಂಡು ಹೋಗುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ರಾಜಕೀಯದಲ್ಲಿ ಮುಂದುವರೆದಿದ್ದೇನೆ. ಕ್ಷೇತ್ರದಲ್ಲಿ ಅಪ್ಪಾಜಿ ಅವರೊಂದಿಗೆ ಅವರ ರಾಜಕೀಯ ಏಳಿಗಾಗಿ ಶ್ರಮಿಸಿರುವ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತೇನೆ ಎಂದರು.
ಕ್ಷೇತ್ರದ ಹಾಲಿ ಶಾಸಕರು ಇತ್ತೀಚೆಗೆ ಕಾಮಗಾರಿಗಳ ಗುದ್ದಲಿ ಪೂಜೆ, ಉದ್ಘಾಟನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿಲ್ಲ. ಶಾಸಕರ ಬದಲಿಗೆ ಅವರ ಸಹೋದರರು, ಪುತ್ರರರು ಪಾಲ್ಗೊಳ್ಳುತ್ತಿದ್ದಾರೆ. ಶಾಸಕರ ಬದಲಾಗಿ ಪಾಲ್ಗೊಳ್ಳುವ ನೈತಿಕತೆ ಅವರಿಗಿಲ್ಲ. ಅದರಲ್ಲೂ ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರ ವಾರ್ಡ್ಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಎಷ್ಟು ಸರಿ ?
- ಶಾರದ ಎಂ.ಜೆ ಅಪ್ಪಾಜಿ.
ಹಲವಾರು ವರ್ಷಗಳಿಂದ ಪಕ್ಷದಲ್ಲಿ ಪದಾಧಿಕಾರಿಗಳ ನೇಮಕ ನಡೆದಿರಲಿಲ್ಲ. ಇದೀಗ ವರಿಷ್ಠರ ಆದೇಶದ ಮೇರೆಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಪಕ್ಷವನ್ನು ಮುನ್ನಡೆಸುವ ಜೊತೆಗೆ ಕ್ಷೇತ್ರದ ನಾಗರೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುತ್ತೇನೆ. ಮುಂದಿನ ದಿನಗಳಲ್ಲಿ ಅಪ್ಪಾಜಿಯವರು ಬಿಟ್ಟು ಹೋಗಿರುವ ಕೆಲಸಗಳನ್ನು ಪೂರ್ಣಗೊಳಿಸುವ ಬಯಕೆ ಹೊಂದಿದ್ದೇನೆ. ಮತದಾರರು ನನನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
No comments:
Post a Comment