Sunday, August 28, 2022

ಕೇಶ ವಿನ್ಯಾಸ, ಸೌಂದರ್ಯ ವರ್ಧನೆ ಕ್ಷೇತ್ರದಲ್ಲೂ ಭದ್ರಾವತಿ ಮುಂಚೂಣಿಗೆ ಬರಲಿ : ಆಶಾಭಟ್

ಭದ್ರಾವತಿ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಿ.ಎನ್ ರಸ್ತೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಹನಿ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಭಾನುವಾರ ಮಾಜಿ ರೂಪದರ್ಶಿ, ಚಲನಚಿತ್ರ ನಟಿ ಆಶಾಭಟ್ ಉದ್ಘಾಟಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಭದ್ರಾವತಿ, ಆ. ೨೮: ಕೇಶ ವಿನ್ಯಾಸ, ಸೌಂದರ್ಯ ವರ್ಧನೆ ಕ್ಷೇತ್ರದ ಉನ್ನತ ಮಟ್ಟದ ಸೌಲಭ್ಯಗಳು ಸ್ಥಳೀಯವಾಗಿ ಲಭ್ಯವಾಗುವ ಮೂಲಕ ಈ ಕ್ಷೇತ್ರದಲ್ಲೂ ಭದ್ರಾವತಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕೆಂದು ಮಾಜಿ ರೂಪದರ್ಶಿ, ಚಲನಚಿತ್ರ ನಟಿ ಆಶಾಭಟ್ ಹೇಳಿದರು.
    ಅವರು ಭಾನುವಾರ ನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಿ.ಎನ್ ರಸ್ತೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಹನಿ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಉದ್ಘಾಟಿಸಿ ಮಾತನಾಡಿದರು.
    ಕೇಶ ವಿನ್ಯಾಸ, ಸೌಂದರ್ಯ ವರ್ಧನೆ ಕೇವಲ ವ್ಯವಹಾರಕ್ಕೆ ಸೀಮಿತವಾಗದೆ ಈ ಕ್ಷೇತ್ರದಲ್ಲಿ ಇತರರು ಸಹ ತೊಡಗಿಸಿಕೊಳ್ಳುವಂತೆ ಮಾಡುವ ಮೂಲಕ ಉದ್ಯೋಗ ಸೃಷ್ಟಿಸಿಕೊಡಬೇಕು. ಆ ಮೂಲಕ ಸಾರ್ಥಕ ಸೇವೆ ಸಲ್ಲಿಸಬೇಕೆಂದರು. ಈ ನಿಟ್ಟಿನಲ್ಲಿ ನೂತನ ಆರಂಭಗೊಂಡಿರುವ ಹನಿ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಸಹಕಾರಿಯಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಉದ್ಯಮಿ ಬಿ.ಕೆ ಜಗನ್ನಾಥ್, ಸೂಡಾ ಸದಸ್ಯೆ ಹೇಮಾವತಿ ವಿಶ್ವನಾಥ್, ಸುಂದರ್ ಬಾಬು, ಎಂ.ಎಸ್ ರವಿ, ಅನ್ನಸತೀಶ್, ರಾಜ್‌ಕುಮಾರ್, ಅಬಿದ್‌ಆಲಿ, ಹನಿ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮಾಲೀಕರಾದ ಸವಿತಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment