Monday, August 15, 2022

೭೫ನೇ ಸ್ವಾತಂತ್ರ್ಯೋತ್ಸವ : ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಹಾಲು, ಸಿಹಿ ವಿತರಣೆ

೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಹಾಲು ಉತ್ಪಾದಕರ ಸಂಘದ ವತಿಯಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಸೋಮವಾರ ನೋಟ್ ಬುಕ್, ಹಾಲು ಮತ್ತು ಸಿಹಿ ವಿತರಿಸಲಾಯಿತು.
    ಭದ್ರಾವತಿ, ಆ. ೧೫ : ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ತಾಲೂಕಿನ ಕಾಚಗೊಂಡನಹಳ್ಳಿ ಹಾಲು ಉತ್ಪಾದಕರ ಸಂಘದ ವತಿಯಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಸೋಮವಾರ ನೋಟ್ ಬುಕ್, ಹಾಲು ಮತ್ತು ಸಿಹಿ ವಿತರಿಸಲಾಯಿತು.
    ಸಂಘದ ಅಧ್ಯಕ್ಷ, ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ಡಿ. ಆನಂದ್ ಅಧ್ಯಕ್ಷತೆಯಲ್ಲಿ ಕಾಚಗೊಂಡನಹಳ್ಳಿ ಮತ್ತು ವಿಜಯನಗರದ ಸರ್ಕಾರಿ ಶಾಲೆಗಳ ಒಟ್ಟು ಸುಮಾರು ೧೮೦ ಬಡ ಮಕ್ಕಳಿಗೆ ನೋಟ್ ಬುಕ್, ಹಾಲು ಮತ್ತು ಸಿಹಿ ವಿತರಿಸುವ ಜೊತೆಗೆ ಹಾಲಿನ ಮಹತ್ವ ಹಾಗು ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು.
    ಕಾಚಗೊಂಡನಹಳ್ಳಿ ಹಾಲು ಉತ್ಪಾದಕರ ಸಂಘದ ವತಿಯಿಂದ ಮೊದಲ ಬಾರಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್‌ಗಳನ್ನು ವಿತರಿಸಲಾಗಿದ್ದು, ಪ್ರತಿ ವರ್ಷ ಸಹ ನೋಟ್ ಬುಕ್‌ಗಳನ್ನು ವಿತರಿಸುವ ಉದ್ದೇಶ ಹೊಂದಲಾಗಿದೆ.
    ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದ ಹೆಗಡೆ, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಬಿ. ಮಂಜುನಾಥ್, ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ಕಾಚಗೊಂಡನಹಳ್ಳಿ ಹಾಲು ಉತ್ಪಾದಕರ ಸಂಘದ ಪದಾಧಿಕಾರಿಗಳು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

No comments:

Post a Comment