Friday, August 12, 2022

೭೫ನೇ ಸ್ವಾತಂತ್ರ್ಯೋತ್ಸವ ನೆನಪಿಗೆ ಹಿರಿಯ ಸದಸ್ಯರಿಗೆ ಗೌರವಾರ್ಪಣೆ, ನೌಕರರ ವರ್ಗಕ್ಕೆ ಸನ್ಮಾನ, ಪ್ರತಿಭಾ ಪುರಸ್ಕಾರ

ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ ಮಾತನಾಡಿದರು.
    ಭದ್ರಾವತಿ, ಆ. ೧೨: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಆ.೧೪ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಹಳೇನಗರದ ವೀರಶೈವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ, ಉಡಿ ತುಂಬುವ ಕಾರ್ಯಕ್ರಮ ಮತ್ತು ೭೫ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗೆ ಮಹಾಸಭಾದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಹಾಗು ಸಮಾಜದ ನೌಕರರ ವರ್ಗಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ ಹೇಳಿದರು.
    ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾಸಭಾ ಗೌರವಾಧ್ಯಕ್ಷರಾದ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ ಮಾಧುಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
    ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಮಹಾಸಭಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಜಿಲ್ಲಾಧ್ಯಕ್ಷ ರುದ್ರಮುನಿ ಎಸ್ ಸಜ್ಜನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಕರ್ನಾಟಕ ರಾಜ್ಯ ಒಳಚರಂಡಿ ಹಾಗು ನೀರು ಸರಬರಾಜು ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಹಟ್ಟಿ ಚಿನ್ನದ ಗಣಿ ನಿರ್ದೇಶಕ ಎಸ್. ಹಾಲೇಶ್ ಕೂಡ್ಲಿಗೆರೆ ಮತ್ತು ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್. ವಿರುಪಾಕ್ಷಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನಡೆಸಿಕೊಡಲಿದ್ದು, ಜಿ. ಸುರೇಶಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾ ತಾಲೂಕು ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಕೆ.ಎಸ್ ರೇವಪ್ಪ, ಖಜಾಂಚಿ ಜಿ.ಎಂ ಮೂರ್ತಿ, ನಿರ್ದೇಶಕಿಯರಾದ ಆರ್.ಎಸ್ ಶೋಭಾ, ಸೌಭಾಗ್ಯಮ್ಮ, ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಕವಿತಾ ಸುರೇಶ್, ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಆನಂದ, ಬಿ.ಎಂ ರಮೇಶ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment