Thursday, August 25, 2022

ದೇವಸ್ಥಾನದ ನೂತನ ಮಳಿಗೆಗಳ ಉದ್ಘಾಟನೆ : ಸನ್ಮಾನ

ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರುಗಿತೋಪಿನ ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ದೇವಸ್ಥಾನದ ಮಳಿಗೆಗಳ ಉದ್ಘಾಟನೆ ಸಂದರ್ಭದಲ್ಲಿ ಮಳಿಗೆಗಳ ನಿರ್ಮಾಣಕ್ಕೆ ಶ್ರಮಿಸಿದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. ೨೫: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರುಗಿತೋಪಿನ ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ದೇವಸ್ಥಾನದ ಮಳಿಗೆಗಳನ್ನು ಉದ್ಘಾಟಿಸಲಾಯಿತು.
    ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಅಸ್ತಿತ್ವಕ್ಕೆ ಬಂದ ನಂತರ ಹಲವಾರು ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ನಡೆಯುತ್ತಿವೆ. ಇದೀಗ ನೂತನವಾಗಿ ನಿರ್ಮಿಸಲಾಗಿರುವ ಮಳಿಗೆಗಳ ಉದ್ಘಾಟನೆ ನೆರವೇರಿಸಲಾಯಿತು. ದೇವಸ್ಥಾನದ ಅರ್ಚಕ ಮುರಳಿಧರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಮಳಿಗೆಗಳ ನಿರ್ಮಾಣಕ್ಕೆ ಶ್ರಮಿಸಿದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
    ನಗರಸಭೆ ಸದಸ್ಯೆ ಜಯಶೀಲ, ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಪರಮೇಶ್ ಮತ್ತು ಖಜಾಂಚಿ ರವಿ, ಮುಖಂಡ ಕ್ಲಬ್ ಸುರೇಶ್ ಸೇರಿದಂತೆ ಸ್ಥಳೀಯ ಪ್ರಮುಖರು, ಭಕ್ತರು ಪಾಲ್ಗೊಂಡಿದ್ದರು.  

No comments:

Post a Comment