ಭದ್ರಾವತಿ ನಗರಸಭೆ ವಾರ್ಡ್ ನಂ.೨೧ರ ಸದಸ್ಯೆ ವಿಜಯ ಅವರು ಈ ಬಾರಿ ಗೌರಿ-ಗಣೇಶ ಹಬ್ಬವನ್ನು ವಾರ್ಡ್ನಲ್ಲಿ ವಿಶಿಷ್ಟವಾಗಿ ಆಚರಿಸುವ ಮೂಲಕ ಸ್ಥಳೀಯರೊಂದಿಗೆ ಸಂಭ್ರಮ ಹಂಚಿಕೊಂಡರು.
ಭದ್ರಾವತಿ, ಆ. ೩೦: ನಗರಸಭೆ ವಾರ್ಡ್ ನಂ.೨೧ರ ಸದಸ್ಯೆ ವಿಜಯ ಅವರು ಈ ಬಾರಿ ಗೌರಿ-ಗಣೇಶ ಹಬ್ಬವನ್ನು ವಾರ್ಡ್ನಲ್ಲಿ ವಿಶಿಷ್ಟವಾಗಿ ಆಚರಿಸುವ ಮೂಲಕ ಸ್ಥಳೀಯರೊಂದಿಗೆ ಸಂಭ್ರಮ ಹಂಚಿಕೊಂಡರು.
ಹಿಂದೂ ಸಂಪ್ರದಾಯದಲ್ಲಿ ಗೌರಿ-ಗಣೇಶ ಹಬ್ಬ ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು, ವಾರ್ಡ್ನ ಎಲ್ಲಾ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಹಬ್ಬದ ಮಹತ್ವ ತಿಳಿಸಿಕೊಡುವ ಜೊತೆಗೆ ವಾರ್ಡ್ ನಿವಾಸಿಗಳ ನೋವು-ನಲಿವುಗಳಿಗಗೆ ಸದಾ ಕಾಲ ಸ್ಪಂದಿಸುತ್ತೇನೆ ಎಂಬ ಸಂದೇಶವನ್ನು ವಿಜಯ ಅವರು ಹಬ್ಬದ ಸಂಭ್ರಮದ ಮೂಲಕ ತೋರ್ಪಡಿಸಿಕೊಂಡಿದ್ದಾರೆ.
ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಮುಖಂಡರಾದ ಡಿ.ಟಿ ಶ್ರೀಧರ್, ಮೈಲಾರಪ್ಪ, ಅಶೋಕ್ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment