ಭದ್ರಾವತಿ ನಗರಸಭೆ ವಾರ್ಡ್ ನಂ.೨೧ರ ಸದಸ್ಯೆ ವಿಜಯ ಅವರು ಈ ಬಾರಿ ಗೌರಿ-ಗಣೇಶ ಹಬ್ಬವನ್ನು ವಾರ್ಡ್ನಲ್ಲಿ ವಿಶಿಷ್ಟವಾಗಿ ಆಚರಿಸುವ ಮೂಲಕ ಸ್ಥಳೀಯರೊಂದಿಗೆ ಸಂಭ್ರಮ ಹಂಚಿಕೊಂಡರು.
ಭದ್ರಾವತಿ, ಆ. ೩೦: ನಗರಸಭೆ ವಾರ್ಡ್ ನಂ.೨೧ರ ಸದಸ್ಯೆ ವಿಜಯ ಅವರು ಈ ಬಾರಿ ಗೌರಿ-ಗಣೇಶ ಹಬ್ಬವನ್ನು ವಾರ್ಡ್ನಲ್ಲಿ ವಿಶಿಷ್ಟವಾಗಿ ಆಚರಿಸುವ ಮೂಲಕ ಸ್ಥಳೀಯರೊಂದಿಗೆ ಸಂಭ್ರಮ ಹಂಚಿಕೊಂಡರು.
ಹಿಂದೂ ಸಂಪ್ರದಾಯದಲ್ಲಿ ಗೌರಿ-ಗಣೇಶ ಹಬ್ಬ ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು, ವಾರ್ಡ್ನ ಎಲ್ಲಾ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಹಬ್ಬದ ಮಹತ್ವ ತಿಳಿಸಿಕೊಡುವ ಜೊತೆಗೆ ವಾರ್ಡ್ ನಿವಾಸಿಗಳ ನೋವು-ನಲಿವುಗಳಿಗಗೆ ಸದಾ ಕಾಲ ಸ್ಪಂದಿಸುತ್ತೇನೆ ಎಂಬ ಸಂದೇಶವನ್ನು ವಿಜಯ ಅವರು ಹಬ್ಬದ ಸಂಭ್ರಮದ ಮೂಲಕ ತೋರ್ಪಡಿಸಿಕೊಂಡಿದ್ದಾರೆ.
ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಮುಖಂಡರಾದ ಡಿ.ಟಿ ಶ್ರೀಧರ್, ಮೈಲಾರಪ್ಪ, ಅಶೋಕ್ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ