ಭದ್ರಾವತಿ, ಆ. ೨೨: ಅನುದಾನ ಮತ್ತು ಅನುದಾನರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಆ.೨೩ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆಯಲಿದೆ.
ಹೊಸಮನೆ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಜ್ಞಾನೇಶ್ವರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕ್ರೀಡಾಕೂಟ ನಡೆಯುತ್ತಿದ್ದು, ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಕ್ರೀಡಾಕೂಟ ಯಶಸ್ವಿಗೊಳಿಸುವಂತೆ ಶಾಲೆಯ ಮುಖ್ಯಶಿಕ್ಷಕರು ಕೋರಿದ್ದಾರೆ.
No comments:
Post a Comment